23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆಯು ಅಧ್ಯಕ್ಷ ವೀರ್ ನವೀನ್ ಜೈನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಮುಖ್ಯ ಅತಿಥಿಯಾಗಿ ವೀರಾಂಗನಾ ಅಪರ್ಣಾ ಜೈನ್ ಭಾಗವಹಿಸಿ ಶಿಖರ್ಜಿ ಯಾತ್ರೆಯ ಅನುಭವವನ್ನೂ ವಿವರಿಸಿ. ತಿಳಿಸಿದರು, ಅವರ ತಂಡ ಪ್ರಯಾಣಿಸುತ್ತಿದ್ದ ರೈಲ್ ಅಪಘಾತಕ್ಕೀಡಾಗಿ ಅದೃಷ್ಟವ ಸಾತ್ ಇವರು ಬದುಕುಳಿದವರು,108 ಮುಣಿಶ್ರೀ ಮಹಿಮಾ ಸಾಗರ್ ಅವರು ಈ ಯಾತ್ರೆಯನ್ನು ಆಯೋಜಿಸಿದ್ದರು, ಅವರ ತಪಸ್ಸಿನ ಫಲದಿಂದ ಯಾವುದೇ ತೊಂದರೆಯಾಗದೆ ಯಾತ್ರೆಯನ್ನು ಪೂರೈಸಿದ ಬಗ್ಗೆ ಮಾಹಿತಿ ನೀಡಿದರು .ಧರ್ಮವನ್ನು ನಾವು ರಕ್ಷಿಸಿದರೆ ಧರ್ಮ ನಮ್ಮನ್ನು ರಕ್ಷಿಸುತ್ತದೆ ಎಂದೂ ತಿಳಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ವಲಯ – 8ರ ನಿರ್ದೇಶಕ ವೀರ್ ಬಿ. ಸೋಮ ಶೇಖರ ಶೆಟ್ಟಿ ಮಾತನಾಡಿ ಸಂಘಟನೆಯ ಮಹತ್ವ ವಿವರಿಸಿ ಎಲ್ಲರ ಸಹಕಾರ ಬಯಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕದ ಅಧ್ಯಕ್ಷ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಘಟಕದ ಕಾರ್ಯದರ್ಶಿಯಾದ ಸಂಪತ್ ಕುಮಾರ್ ಜೈನ್ ಇವರು ನಡೆಸಿಕೊಟ್ಟರು ಮಿಲನ ಎಲ್ಲಾ ಹಿರಿಯ ಮತ್ತು ಕಿರಿಯ ಸದಸ್ಯರುಗಳು ಮುಂದಿನ ಒಂದು ವರ್ಷಗಳ ಕಾಲ ಘಟಕದ ವತಿಯಿಂದ ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

Related posts

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

Suddi Udaya
error: Content is protected !!