24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಜು.1ರಂದು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸ್ಥಳೀಯ ವೈದ್ಯ ಡಿ ಧರಣೇoದ್ರ ಜೈನ್ ಅವರು ಮಕ್ಕಳು ತಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳಬೇಕು. ದಿನನಿತ್ಯ ಬೆಳಿಗ್ಗೆ ಸ್ನಾನ ಮಾಡಿ ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಮಿತವಾಗಿ ಆಹಾರ ಸೇವನೆ ಮಾಡಿ, ಜಾಸ್ತಿ ನೀರು ಕುಡಿಯಬೇಕು. ನಿಮ್ಮ ಅರೋಗ್ಯ ನಿಮ್ಮ ಕೈಯಲ್ಲಿದೆ ಕಾಪಾಡಿಕೊಳ್ಳಬೇಕು ಎಂದು ಹೇಳುತ್ತಾ ವಿದ್ಯಾರ್ಥಿಗಳ ಪ್ರಶ್ನೆಗೆ ಸಮರ್ಪಕವಾದ ಉತ್ತರವನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಶಾಲಾ ಮುಖ್ಯ ಗುರುಗಳಾದ ಪಿ ಸುಬ್ರಹ್ಮಣ್ಯ ರಾವ್ ಇವರು ಮನುಷ್ಯರು ಬದುಕಬೇಕಾದರೆ ಮೂಲಭೂತ ಅಗತ್ಯತೆ ಗಳೊಂದಿಗೆ ಆರೋಗ್ಯ ಕೂಡ ತುಂಬಾ ಮುಖ್ಯ.ಆರೋಗ್ಯವೇ ಭಾಗ್ಯ .ನಮ್ಮ ಅರೋಗ್ಯವನ್ನು ಕಾಪಾಡುವ ವೈದ್ಯರು ದೇವರಿಗೆ ಸಮಾನ ಎಂದು ನುಡಿದರು.

ವಿದ್ಯಾರ್ಥಿ ಗಳು ಪ್ರಾರ್ಥಿಸಿ, ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ವಂದಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ಗಿರಿಜಾ ನಿರೂಪಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya
error: Content is protected !!