25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಜು.1ರಂದು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸ್ಥಳೀಯ ವೈದ್ಯ ಡಿ ಧರಣೇoದ್ರ ಜೈನ್ ಅವರು ಮಕ್ಕಳು ತಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳಬೇಕು. ದಿನನಿತ್ಯ ಬೆಳಿಗ್ಗೆ ಸ್ನಾನ ಮಾಡಿ ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಮಿತವಾಗಿ ಆಹಾರ ಸೇವನೆ ಮಾಡಿ, ಜಾಸ್ತಿ ನೀರು ಕುಡಿಯಬೇಕು. ನಿಮ್ಮ ಅರೋಗ್ಯ ನಿಮ್ಮ ಕೈಯಲ್ಲಿದೆ ಕಾಪಾಡಿಕೊಳ್ಳಬೇಕು ಎಂದು ಹೇಳುತ್ತಾ ವಿದ್ಯಾರ್ಥಿಗಳ ಪ್ರಶ್ನೆಗೆ ಸಮರ್ಪಕವಾದ ಉತ್ತರವನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಶಾಲಾ ಮುಖ್ಯ ಗುರುಗಳಾದ ಪಿ ಸುಬ್ರಹ್ಮಣ್ಯ ರಾವ್ ಇವರು ಮನುಷ್ಯರು ಬದುಕಬೇಕಾದರೆ ಮೂಲಭೂತ ಅಗತ್ಯತೆ ಗಳೊಂದಿಗೆ ಆರೋಗ್ಯ ಕೂಡ ತುಂಬಾ ಮುಖ್ಯ.ಆರೋಗ್ಯವೇ ಭಾಗ್ಯ .ನಮ್ಮ ಅರೋಗ್ಯವನ್ನು ಕಾಪಾಡುವ ವೈದ್ಯರು ದೇವರಿಗೆ ಸಮಾನ ಎಂದು ನುಡಿದರು.

ವಿದ್ಯಾರ್ಥಿ ಗಳು ಪ್ರಾರ್ಥಿಸಿ, ಶ್ರೀಮತಿ ಶ್ರೀಜಾ ಸ್ವಾಗತಿಸಿ, ಶ್ರೀಮತಿ ಪೂರ್ಣಿಮಾ ವಂದಿಸಿದರು. ಕಾರ್ಯಕ್ರಮವನ್ನು ಶ್ರೀಮತಿ ಗಿರಿಜಾ ನಿರೂಪಿಸಿದರು. ಕಾರ್ಯಕ್ರಮಕ್ಕೆ ಎಲ್ಲಾ ಶಿಕ್ಷಕರು ಸಹಕರಿಸಿದರು.

Related posts

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮನ್‌ಶರ್ ಪಿ.ಯು. ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಂಸಶ್ರೀ ಬಿ.ಆರ್. ಅಧಿಕಾರ ಸ್ವೀಕಾರ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!