25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

ಕನ್ಯಾಡಿ: ಸ.ಉ.ಹಿ.ಪ್ರಾ.ಶಾಲೆಯಲ್ಲಿ 15ವರ್ಷಗಳ ಕಾಲ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೀರಣ್ಣ ಶೆಟ್ಟಿರವರು ಜೂ.30ರಂದು ಸೇವಾ ನಿವೃತ್ತರಾದರು.

ಇವರು 1999 ಜನವರಿ 13ರಂದು ದೇವರಗುಡ್ಡೆ ಸ.ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡು. 2002-03ನೇ ಸಾಲಿನಲ್ಲಿ ನಿಯೋಜನೆಗೊಂಡುಸ.ಕಿ.ಪ್ರಾ. ಶಾಲೆ ಬೆಳಾಲು-ಪೆರಿಯಡ್ಕದಲ್ಲಿ ಸ್ಥಾಪಕ ಮುಖ್ಯ ಶಿಕ್ಷಕರಾಗಿ ಒಂದೂವರೆ ವರ್ಷ ಕಾಲ ಕರ್ತವ್ಯ ನಿರ್ವಹಿಸಿದ್ದರು. ನಂತರ 2005-06ನೇ ಸಾಲಿನಲ್ಲಿ ಸ.ಹಿ.ಪ್ರಾ. ಶಾಲೆ ದೇವರಗುಡ್ಡೆಯಿಂದ ನಿಯೋಜನೆಗೊಂಡು, ಉಜಿರೆ ಸ.ಕಿ.ಪ್ರಾ. ಶಾಲೆ ಮುಂಡತ್ತೋಡಿಯಲ್ಲಿ ಸ್ಥಾಪಕ ಮುಖ್ಯಶಿಕ್ಷಕರಾಗಿ ಮೂರುವರೆ ವರ್ಷ ಕಾಲ ಸೇವೆ ಸಲ್ಲಿಸಿ, ಸರಕಾರದ ಅನುದಾನದಲ್ಲಿ ಶಾಲಾ ಕಟ್ಟಡ ಕಟ್ಟಿಸುವಲ್ಲಿ ಮುತುವರ್ಜಿ ವಹಿಸಿ, ಉತ್ತಮ ಶಾಲೆಯಾಗಿ ಹಾಗೂ ನಲಿಕಲಿ ಉತ್ತಮವಾಗಿ ನಡೆಯಲು ಕಾರಣಕರ್ತರಾದರು.

2008-09ನೇ ಸಾಲಿನಲ್ಲಿ ಮುಂಡತ್ತೋಡಿ ಶಾಲೆಯಿಂದ ವರ್ಗಾವಣೆಗೊಂಡು, ಒಟ್ಟು 25ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸಿ ಜೂ.30ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

Related posts

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಕಳೆಂಜ : ಶೌರ್ಯ ಸ್ವಯಂಸೇವಕ ಶೀನಪ್ಪ ನಾಯ್ಕ್ ರಿಗೆ ಸನ್ಮಾನ

Suddi Udaya

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya
error: Content is protected !!