22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

ಕನ್ಯಾಡಿ: ಸ.ಉ.ಹಿ.ಪ್ರಾ.ಶಾಲೆಯಲ್ಲಿ 15ವರ್ಷಗಳ ಕಾಲ ಸಹಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ವೀರಣ್ಣ ಶೆಟ್ಟಿರವರು ಜೂ.30ರಂದು ಸೇವಾ ನಿವೃತ್ತರಾದರು.

ಇವರು 1999 ಜನವರಿ 13ರಂದು ದೇವರಗುಡ್ಡೆ ಸ.ಹಿ.ಪ್ರಾ.ಶಾಲೆಯಲ್ಲಿ ಸಹಶಿಕ್ಷಕರಾಗಿ ಕರ್ತವ್ಯಕ್ಕೆ ಸೇರ್ಪಡೆಗೊಂಡು. 2002-03ನೇ ಸಾಲಿನಲ್ಲಿ ನಿಯೋಜನೆಗೊಂಡುಸ.ಕಿ.ಪ್ರಾ. ಶಾಲೆ ಬೆಳಾಲು-ಪೆರಿಯಡ್ಕದಲ್ಲಿ ಸ್ಥಾಪಕ ಮುಖ್ಯ ಶಿಕ್ಷಕರಾಗಿ ಒಂದೂವರೆ ವರ್ಷ ಕಾಲ ಕರ್ತವ್ಯ ನಿರ್ವಹಿಸಿದ್ದರು. ನಂತರ 2005-06ನೇ ಸಾಲಿನಲ್ಲಿ ಸ.ಹಿ.ಪ್ರಾ. ಶಾಲೆ ದೇವರಗುಡ್ಡೆಯಿಂದ ನಿಯೋಜನೆಗೊಂಡು, ಉಜಿರೆ ಸ.ಕಿ.ಪ್ರಾ. ಶಾಲೆ ಮುಂಡತ್ತೋಡಿಯಲ್ಲಿ ಸ್ಥಾಪಕ ಮುಖ್ಯಶಿಕ್ಷಕರಾಗಿ ಮೂರುವರೆ ವರ್ಷ ಕಾಲ ಸೇವೆ ಸಲ್ಲಿಸಿ, ಸರಕಾರದ ಅನುದಾನದಲ್ಲಿ ಶಾಲಾ ಕಟ್ಟಡ ಕಟ್ಟಿಸುವಲ್ಲಿ ಮುತುವರ್ಜಿ ವಹಿಸಿ, ಉತ್ತಮ ಶಾಲೆಯಾಗಿ ಹಾಗೂ ನಲಿಕಲಿ ಉತ್ತಮವಾಗಿ ನಡೆಯಲು ಕಾರಣಕರ್ತರಾದರು.

2008-09ನೇ ಸಾಲಿನಲ್ಲಿ ಮುಂಡತ್ತೋಡಿ ಶಾಲೆಯಿಂದ ವರ್ಗಾವಣೆಗೊಂಡು, ಒಟ್ಟು 25ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿ, ಪ್ರಸ್ತುತ ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸಹಶಿಕ್ಷಕರಾಗಿ ಸೇವೆ ಸಲ್ಲಿಸಿ ಜೂ.30ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

Related posts

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಎಸ್.ಕೆ.ಡಿ.ಆರ್.ಡಿ.ಪಿ, ಶೌರ್ಯ ವಿಪತ್ತು ನಿರ್ವಹಣಾ ತಂಡ, ಧರ್ಮಸ್ಥಳ ಸಿಬ್ಬಂದಿಗಳು, ಗ್ರಾಮಸ್ಥರಿಂದ ನೇತ್ರಾವತಿ ನದಿ ಸ್ವಚ್ಛತಾ ಕಾರ್ಯ

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!