22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಗುತ್ಯಡ್ಕ ಸಮೀಪ ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನೇತ್ರಾವತಿ ಉಗಮ ಸ್ಥಾನಕ್ಕೆ ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಜೂ.30 ರಂದು ನಡೆದಿದೆ.

ಮೈಸೂರಿನ ಜೆಪಿ ನಗರದ ನಿವಾಸಿ ರಕ್ಷಿತ್ (27ವ. ) ಮೃತಪಟ್ಟ ಯುವಕನಾಗಿದ್ದು ತನ್ನ ಇತರ ಐವರು ಗೆಳೆಯರೊಂದಿಗೆ ಹೊರನಾಡಿಗೆ ಬಂದಿದ್ದು ಅಲ್ಲಿಂದ ಶುಕ್ರವಾರ ನೇತ್ರಾವತಿ ಉಗಮ ಸ್ಥಾನದ ಕಡೆ ಚಾರಣ ಹೊರಟಿದ್ದರು.

ಸಂಸೆ ಮೂಲಕ ಸಾಗಿ ಎಳನೀರು ಗಡಿ ದಾಟಿ ನಾಲ್ಕು ಕಿ.ಮಿ. ಚಾರಣ ನಡೆಸಿದಾಗ ತೀವ್ರ ಎದೆ ನೋವಿನಿಂದ ಬಳಲಿದ ಯುವಕನನ್ನು ತಂಡದ ಇತರ ಸದಸ್ಯರ ಜತೆ ಸ್ಥಳೀಯರು ಹೊತ್ತು ತಂದು ಕಳಸ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಇಲ್ಲಿನ ವೈದ್ಯರು ಪರೀಕ್ಷಿಸಿದಾಗ ಯುವಕ ಮೃತಪಟ್ಟಿರುವುದು ತಿಳಿದುಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಸಂಸೆಯ ಸಮೀಪ ಇರುವ ಈ ಸ್ಥಳ ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಗೆ ಬರುತ್ತದೆ. ಆರಂಭದಲ್ಲಿ ಕಳಸ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಘಟನೆ ನಡೆದ ಸ್ಥಳ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದು ಬೆಳ್ತಂಗಡಿ ಪೊಲೀಸರು ಕಳಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Related posts

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ರಾಜ್ಯ ಸರ್ಕಾರದಿಂದ ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ : ಇದು ಬಡಜನರ ಮೇಲಿನ ಮರಣ ಶಾಸನ: ಶೇಖರ ಎಲ್

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya
error: Content is protected !!