26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಗುತ್ಯಡ್ಕ ಸಮೀಪ ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನೇತ್ರಾವತಿ ಉಗಮ ಸ್ಥಾನಕ್ಕೆ ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಜೂ.30 ರಂದು ನಡೆದಿದೆ.

ಮೈಸೂರಿನ ಜೆಪಿ ನಗರದ ನಿವಾಸಿ ರಕ್ಷಿತ್ (27ವ. ) ಮೃತಪಟ್ಟ ಯುವಕನಾಗಿದ್ದು ತನ್ನ ಇತರ ಐವರು ಗೆಳೆಯರೊಂದಿಗೆ ಹೊರನಾಡಿಗೆ ಬಂದಿದ್ದು ಅಲ್ಲಿಂದ ಶುಕ್ರವಾರ ನೇತ್ರಾವತಿ ಉಗಮ ಸ್ಥಾನದ ಕಡೆ ಚಾರಣ ಹೊರಟಿದ್ದರು.

ಸಂಸೆ ಮೂಲಕ ಸಾಗಿ ಎಳನೀರು ಗಡಿ ದಾಟಿ ನಾಲ್ಕು ಕಿ.ಮಿ. ಚಾರಣ ನಡೆಸಿದಾಗ ತೀವ್ರ ಎದೆ ನೋವಿನಿಂದ ಬಳಲಿದ ಯುವಕನನ್ನು ತಂಡದ ಇತರ ಸದಸ್ಯರ ಜತೆ ಸ್ಥಳೀಯರು ಹೊತ್ತು ತಂದು ಕಳಸ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಇಲ್ಲಿನ ವೈದ್ಯರು ಪರೀಕ್ಷಿಸಿದಾಗ ಯುವಕ ಮೃತಪಟ್ಟಿರುವುದು ತಿಳಿದುಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಸಂಸೆಯ ಸಮೀಪ ಇರುವ ಈ ಸ್ಥಳ ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಗೆ ಬರುತ್ತದೆ. ಆರಂಭದಲ್ಲಿ ಕಳಸ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಘಟನೆ ನಡೆದ ಸ್ಥಳ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದು ಬೆಳ್ತಂಗಡಿ ಪೊಲೀಸರು ಕಳಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರನ್ನು ಭೇಟಿ ಮಾಡಿದ ಬೆಳ್ತಂಗಡಿ ವಕೀಲರ ಸಂಘ

Suddi Udaya

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!