23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಗುತ್ಯಡ್ಕ ಸಮೀಪ ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ನೇತ್ರಾವತಿ ಉಗಮ ಸ್ಥಾನಕ್ಕೆ ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಜೂ.30 ರಂದು ನಡೆದಿದೆ.

ಮೈಸೂರಿನ ಜೆಪಿ ನಗರದ ನಿವಾಸಿ ರಕ್ಷಿತ್ (27ವ. ) ಮೃತಪಟ್ಟ ಯುವಕನಾಗಿದ್ದು ತನ್ನ ಇತರ ಐವರು ಗೆಳೆಯರೊಂದಿಗೆ ಹೊರನಾಡಿಗೆ ಬಂದಿದ್ದು ಅಲ್ಲಿಂದ ಶುಕ್ರವಾರ ನೇತ್ರಾವತಿ ಉಗಮ ಸ್ಥಾನದ ಕಡೆ ಚಾರಣ ಹೊರಟಿದ್ದರು.

ಸಂಸೆ ಮೂಲಕ ಸಾಗಿ ಎಳನೀರು ಗಡಿ ದಾಟಿ ನಾಲ್ಕು ಕಿ.ಮಿ. ಚಾರಣ ನಡೆಸಿದಾಗ ತೀವ್ರ ಎದೆ ನೋವಿನಿಂದ ಬಳಲಿದ ಯುವಕನನ್ನು ತಂಡದ ಇತರ ಸದಸ್ಯರ ಜತೆ ಸ್ಥಳೀಯರು ಹೊತ್ತು ತಂದು ಕಳಸ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಇಲ್ಲಿನ ವೈದ್ಯರು ಪರೀಕ್ಷಿಸಿದಾಗ ಯುವಕ ಮೃತಪಟ್ಟಿರುವುದು ತಿಳಿದುಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಸಂಸೆಯ ಸಮೀಪ ಇರುವ ಈ ಸ್ಥಳ ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಗೆ ಬರುತ್ತದೆ. ಆರಂಭದಲ್ಲಿ ಕಳಸ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಘಟನೆ ನಡೆದ ಸ್ಥಳ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದು ಬೆಳ್ತಂಗಡಿ ಪೊಲೀಸರು ಕಳಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Related posts

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಹಫ್ಸಾ ಬಾನು ಅವರಿಗೆ ಬ್ಯಾರಿವಾರ್ತೆ ಪ್ರಶಸ್ತಿ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya
error: Content is protected !!