25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

ಮುಂಡಾಜೆ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಮುಂಡಾಜೆ ಗ್ರಾ.ಪಂ. ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಂಜಿನಿಯವರ ಅಧ್ಯಕ್ಷತೆಯಲ್ಲಿ ಜು.1 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ರವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ರಿಶಾ ಪಟವರ್ಧನ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸದಸ್ಯರುಗಳಾದ ವಿಮಲ ಎಚ್.ಎಸ್, ಸುಮಲತಾ, ಯಶೋಧ, ಅಶ್ವಿನಿ, ಎ ರಾಮಣ್ಣ ಶೆಟ್ಟಿ, ವಿಶ್ವನಾಥ ಶೆಟ್ಟಿ, ಗಣೇಶ ಬಂಗೇರ, ರವಿಚಂದ್ರ, ಜಗದೀಶ, ಅಂಗನವಾಡಿ ಕಾರ್ಯಕರ್ತೆ ಅಮ್ಮಿ ಬಿ.ಪಿ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪಂ. ಅಭಿವೃದ್ಧಿ ಅಧಿಕಾರಿ ಗಾಯತ್ರಿ ಸ್ವಾಗತಿಸಿ, ವಾರ್ಡ್ ಸಭೆಗಳಲ್ಲಿ ಬಂದ ಪ್ರಸ್ತಾವನೆ ಹಾಗೂ ಜಮಾ ಖರ್ಚಿನ ಬಗ್ಗೆ ವರದಿ ವಾಚಿಸಿದರು.

Related posts

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಜಿರೆ ಘಟಕದಿಂದ ಸಾರಿಗೆ ಇಲಾಖೆಯ ನಿರ್ಲಕ್ಷತೆಯಿ೦ದ ನಡೆದ ಬಸ್‌ ಅಪಘಾತ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಬಸ್ಸಿನ ಸಮಸ್ಯೆಯ ವಿರುದ್ಧ ರಸ್ತೆ ತಡೆ ಮಾಡಿ ಪ್ರತಿಭಟನೆ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya
error: Content is protected !!