25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ , ಶ್ರೀ ಮಹಮ್ಮಾಯಿ ಕ್ಷೇತ್ರ ಸೇವಾ ಟ್ರಸ್ಟ್ ಶಿವಾಜಿನಗರ ಉರುವಾಲು ಪದವು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಟ್ರಸ್ಟ್ ಉರುವಾಲು ವಿಭಾಗ, ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿದ್ದೋದ್ದೇಶ ಸಹಕಾರ ಸಂಘ, ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಜೂ.30 ರಂದು ಶ್ರೀ ಮಹಮ್ಮಾಯಿ ದೇವಸ್ಥಾನ ಉರುವಾಲುಪದವು ಇಲ್ಲಿ ನೆರವೇರಿತು.

ಕಣಿಯೂರು ಗ್ರಾಮ ಪಂಚಾಯತ್‌ ಅಧ್ಯಕ್ಷೆ ಶ್ರೀಮತಿ ಗಾಯತ್ರಿ ಗೋಪಾಲ ಗೌಡ ಗಿಡವನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ ಮಾತನಾಡುತ್ತಾ ಮಹಮ್ಮಾಯಿ ದೇವಸ್ಥಾನದ ಆವರಣದ ಸುತ್ತ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿ ವಿವಿಧ ರೀತಿಯ ಹಣ್ಣಿನ ಮತ್ತು ಹೂವಿನ ಗಿಡಗಳನ್ನು ನೆಡುವುದರ ಮೂಲಕ ಪ್ರಕೃತಿಯ ರಕ್ಷಣೆಯಾಗಿದೆ. ನಾವು ಪ್ರಕೃತಿಯನ್ನು ನಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದರಿಂದ ಇಂದು ಹವಾಮಾನದ ಏರುಪೇರುಗಳು, ಕಂಡುಬರುತ್ತದೆ. ಇದರಿಂದಾಗಿ ಇಂದು ಮಳೆಗಾಲದಲ್ಲಿ ಸರಿಯಾಗಿ ಮಳೆಯಾಗುತ್ತಿಲ್ಲ. ಆದ್ದರಿಂದ ಗಿಡಗಳನ್ನು ನೆಡುವುದರ ಮೂಲಕ ಪಕೃತಿಯನ್ನು ರಕ್ಷಿಸುವಂತೆ ಕರೆ ನೀಡಿದರು, ಯೋಜನಾಧಿಕಾರಿ ದಯಾನಂದ ಪೂಜಾರಿ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಹಾಗೂ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಲಿಂಗಪ್ಪ ನಾಯ್ಕ, ಉರುವಾಲು ಮಾತನಾಡುತ್ತಾ ಈ ಗಿಡಗಳನ್ನು ಪೋಷಿಸುವ ಕಾರ್ಯ ಪ್ರಮುಖವಾದದ್ದು, ಈ ಕಾರ್ಯವನ್ನು ಜೈ ಶಿವಾಜಿ ಗೆಳೆಯರ ಬಳಗದ ತಂಡ ನಿರ್ವಹಿಸುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಹಸ್ರ ಲಿಂಗೇಶ್ವರ ದೇವಸ್ಥಾನ, ಉಪ್ಪಿನಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಸದಸ್ಯ ಸುನೀಲ್ ಗೌಡ ಅನಾವು, ಲ್ಯಾಂಪ್ಸ್ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಶ್ರೀಮತಿ ಜಯಂತಿ ಹಾಗೂ ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನದ ಸಹ ಮೊಕ್ತೇಸರರಾದ ಸೇಸಪ್ಪ ರೈ ಕೊರಿಂಜ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಪ್ರಗತಿಬಂಧು ಒಕ್ಕೂಟ ಕುಪ್ಪೆಟ್ಟಿ & ಉರುವಾಲು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ, ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಲೇಜಿ, ಶ್ರೀ ವಿಶ್ವೇಶ್ವರ ಭಜನಾ ಮಂದಿರ ಕಾರಿಂಜ ಉರುವಾಲು, ಶ್ರೀ ಸತ್ಯನಾರಾಯಣ ಭಜನಾ ಮಂದಿರ ಉರುವಾಲು, ಶ್ರೀ ಗಣೇಶ್ ಭಜನಾ ಮಂದಿರ ಕುಪ್ಪೆಟ್ಟ, ಶ್ರೀ ಮಹಮ್ಮಾಯಿ ಮರಾಠಿ ಸಮಾಜ ಸೇವಾ ಸಂಘ ಉರುವಾಲು, ನಂದಗೋಕುಲ ಗೆಳೆಯರ ಬಳಗ ಗೋಕುಲಾ ನಗರ ಬನಾರಿ, ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೊರಿ೦ಜ, ಜೈ ಶಿವಾಜಿ ಗೆಳೆಯರ ಬಳಗ ಈ ಎಲ್ಲಾ ಸಂಘ-ಸಂಸ್ಥೆಗಳು ಸಹಕಾರಿಸಿ ಯಶಸ್ವಿಗೊಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟಿನ ಪದಾಧಿಕಾರಿಗಳು, ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಕ್ಷೇತ್ರದ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದರು. ಸಂಪಿಗೆಯ ಮತ್ತು ಶ್ರೀ ಗಂಧದ ಗಿಡಗಳನ್ನು ವಿತರಿಸಲಾಯಿತು.

ಸೇವಾ ಪ್ರತಿನಿಧಿ ಸೀತಾರಾಮ ಆಳ್ವ ಕೊರಿಂಜ ಸ್ವಾಗತಿಸಿದರು. ಶ್ರೀ ಕ್ಷೇತ್ರ ಮೇಲ್ವಿಚಾರಕರಾದ ಶಿವಾನಂದ ಕಾರ್ಯಕ್ರಮವನ್ನು ನಿರೂಪಿಸಿದರು. ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಕೆ ಧನ್ಯವಾದವಿತ್ತರು.

Related posts

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya
error: Content is protected !!