March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

ವೇಣೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ‌ ವೇಣೂರು ನೂತನ ಬಸ್ ತಂಗುದಾಣದ ಸಭಾಭವನದಲ್ಲಿ ಜು. 1 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜಯ್ಯ ನಾಯ್ಕ್ ಗ್ರಾಮಸಭೆಯನ್ನು ಮುನ್ನಡೆಸಿದರು

ವೇಣೂರು ಪೇಟೆಯ ಎಲ್ಲಾ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.ವಿಶೇಷವಾಗಿ ಬಜಿರೆ ಶಾಲೆಯ 8 ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕಲಾಪ ವೀಕ್ಷಣೆ ಮಾಡಿದರು.ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಹಲವಾರು ಚರ್ಚೆಗಳು ನಡೆದವು.

ಗ್ರಾಮ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ , ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಡಿ, ಸದಸ್ಯರಾದ ಸುಮ, ಮಾಲತಿ, ಅರುಣ ಹೆಗ್ಡೆ, ಜಿನ್ನು, ಶೈಲಜಾ, ಸುಂದರ ಹೆಗ್ಡೆ, ಅನೂಪ್ ಜೆ ಪಾಯಸ್,ವೀಣಾ, ಉಮೇಶ್, ಹರೀಶ್,ಶುಭ, ಸುಚಿತ್ರಾ, ಜಯಂತಿ,ದಿನೇಶ, ವಸಂತಿ, ಸಂಭಾಷಿಣಿ, ಅರುಣ ಕ್ರಾಸ್ತಾ, ಮಲ್ಲಿಕಾ ಹೆಗ್ಡೆ,ಲೀಲಾವತಿ, ಸುಜಾತ, ಲೋಕಯ್ಯ ಪೂಜಾರಿ, ಸುನೀಲ್ ಕುಮಾರ್ ಪಿ ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು, ಅಂಗನವಾಡಿ,ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಗ್ರಾಮಸ್ಥರು, ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾ.ಪಂ. ವತಿಯಿಂದ ಸನ್ಮಾನ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya
error: Content is protected !!