April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಗ್ರಾಮ ಸಭೆ: ವೇಣೂರು ಪೇಟೆಯಲ್ಲಿ ಎಲ್ಲ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರ ಒತ್ತಾಯ

ವೇಣೂರು ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ನೇಮಯ್ಯ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ‌ ವೇಣೂರು ನೂತನ ಬಸ್ ತಂಗುದಾಣದ ಸಭಾಭವನದಲ್ಲಿ ಜು. 1 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಮಂಜಯ್ಯ ನಾಯ್ಕ್ ಗ್ರಾಮಸಭೆಯನ್ನು ಮುನ್ನಡೆಸಿದರು

ವೇಣೂರು ಪೇಟೆಯ ಎಲ್ಲಾ ಅಂಗಡಿಗಳಿಗೆ ಗ್ರಾಮಸಭೆಯ ನೋಟೀಸ್ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು.ವಿಶೇಷವಾಗಿ ಬಜಿರೆ ಶಾಲೆಯ 8 ನೇ ತರಗತಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕಲಾಪ ವೀಕ್ಷಣೆ ಮಾಡಿದರು.ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಹಲವಾರು ಚರ್ಚೆಗಳು ನಡೆದವು.

ಗ್ರಾಮ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ್ ಎಂ , ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಡಿ, ಸದಸ್ಯರಾದ ಸುಮ, ಮಾಲತಿ, ಅರುಣ ಹೆಗ್ಡೆ, ಜಿನ್ನು, ಶೈಲಜಾ, ಸುಂದರ ಹೆಗ್ಡೆ, ಅನೂಪ್ ಜೆ ಪಾಯಸ್,ವೀಣಾ, ಉಮೇಶ್, ಹರೀಶ್,ಶುಭ, ಸುಚಿತ್ರಾ, ಜಯಂತಿ,ದಿನೇಶ, ವಸಂತಿ, ಸಂಭಾಷಿಣಿ, ಅರುಣ ಕ್ರಾಸ್ತಾ, ಮಲ್ಲಿಕಾ ಹೆಗ್ಡೆ,ಲೀಲಾವತಿ, ಸುಜಾತ, ಲೋಕಯ್ಯ ಪೂಜಾರಿ, ಸುನೀಲ್ ಕುಮಾರ್ ಪಿ ಮತ್ತು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು, ಅಂಗನವಾಡಿ,ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಗ್ರಾಮಸ್ಥರು, ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya
error: Content is protected !!