25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

ಅರಸಿನಮಕ್ಕಿ : ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ ಯ ಮೂಲಕ ಉತ್ತಮ ಮಾಹಿತಿಯೊಂದಿಗೆ ತರಬೇತಿ ಕಾರ್ಯಕ್ರಮ ಜೂ.30 ರಂದು ನಡೆಯಿತು.

ತರಬೇತಿ ಕಾರ್ಯಕ್ರಮವನ್ನು ಅರಸಿನಮಕ್ಕಿ ಗ್ರಾ.ಪಂ.ಅಧ್ಯಕ್ಷ ನವೀನ್ ಕೆ.ಎನ್ ಉದ್ಘಾಟಿಸಿದರು

ಸ್ಥಳೀಯರಾದ ಶಿವರಾಮ ಮೇಣದ ಬತ್ತಿ ತರಬೇತಿಯನ್ನು ಉತ್ತಮ ರೀತಿಯ ವಿವರಣೆಯೊಂದಿಗೆ ಪ್ರಾತ್ಯಕ್ಷಿಕೆಯ ಮೂಲಕ ಸದಸ್ಯರಿಗೆ ಮಾಹಿತಿ ನೀಡಿದರು.

ಉದ್ಯೋಗದ ಬಗೆಗಿನ ವಸ್ತುಗಳ ಖರೀದಿ ಮಾರಾಟದ ವಿಧಾನ ಇವುಗಳ ಬಗ್ಗೆ ಉತ್ತಮ ರೀತಿಯ ಸಲಹೆ ಸೂಚನೆಗಳನ್ನು ತಾಲೂಕು ಮೇಲ್ವಿಚಾರಕಿ ಪ್ರತಿಮಾ ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಶಸ್ತಿ ಪಡೆದ ನೀತೇಶ್ ಇವರಿಗೆ ಒಕ್ಕೂಟದ ಪರವಾಗಿ ಸನ್ಮಾನ ನಡೆದವು. ಹಾಗೂ ಗಾಯತ್ರಿ ಮೆಹಂದಲೇ ಯವರು ದೀಪದ ಬತ್ತಿ ಮಾಡುವ ತರಬೇತಿ ಯನ್ನು ಉತ್ತಮ ರೀತಿಯಲ್ಲಿ ನಡೆಸಿದರು,

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು, ನಿತೇಶ್, ವೀಣಶ್ರೀ ಎಲ್.ಸಿ.ಆರ್.ಪಿ ಅಮಿತಾ ಎಮ್.ಬಿ.ಕೆ ರೇವತಿ, ಕೃಷಿ ಉದ್ಯೋಗ ಸಖಿ ಹಾಗೂ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್.ಸಿ.ಆರ್.ಪಿ ಹೇಮಲತಾ ನಿರೂಪಿಸಿ, ಕೃಷಿ ಸಖಿ ನೀತಾ ಸ್ವಾಗತಿಸಿ, ಪಶು ಸಖಿ ವೇದಾವತಿ ಧನ್ಯವಾದವಿತ್ತರು.

Related posts

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!