September 6, 2026
Uncategorizedಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯಿಂದ ನೀಡಿದ 2023-24 ಸಾಲಿನ ಯೋಜನಾ ಪುಸ್ತಕ ಬಿಡುಗಡೆ ಕಾರ್ಯಕ್ರಮ ಜೂ. 30 ರಂದು ನಡೆಯಿತು.

ಯೋಜನಾ ಪುಸ್ತಕ ಬಿಡುಗಡೆಯನ್ನು ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರಾದ ಸುರೇಶ್ ಕುಮಾರ್, ಬೆಳ್ತಂಗಡಿ ತಾಲೂಕಿನ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ವೀರೂಪಾಕ್ಷಪ್ಪ, ಪ್ರಭಾರ ಆರೋಗ್ಯಧಿಕಾರಿ ಪ್ರಕಾಶ್, ಸರಕಾರಿ ನೌಕರರ ಅಧ್ಯಕ್ಷರಾದ ಜಯರಾಜ್ ಹಾಗೂ ಪದಾಧಿಕಾರಿಗಳು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಸಕರಾಗಿ ಪುನರ್ ಆಯ್ಕೆಯಾದ ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ರವರಿಗೆ ಭಾರತ್ ಸ್ಕೌಟ್ ಮತ್ತು ಗೈಡ್ ನಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿ ಎಂ.ಜಿ ಕಜೆ, ಜಿಲ್ಲಾ ಸ್ಕೌಟ್ ಆಯುಕ್ತರಾದ ರಾಮಶೇಷ ಶೆಟ್ಟಿ, ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ, ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಎಚ್ ಪದ್ಮ ಕುಮಾರ್, ನಿಕಟ ಪೂರ್ವ ಅಧ್ಯಕ್ಷರಾದ ವಿಠಲ್ ಶೆಟ್ಟಿ, ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ, ಕೋಶಾಧಿಕಾರಿ ಶ್ರೀ ಬೆಳ್ಳಿಯಪ್ಪ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಎಡಿಸಿ ಲೋಕೇಶ್ವರಿ ವಿನಯ ಚಂದ್ರ, ವಾಟರ್ ಜೆ ಪಿಂಟೋ,ಹಿರಿಯ ತರಬೇತುದಾರರಾದ ರಮೇಶ್ ಆಚಾರ್ಯ,ಸ್ಥಳೀಯ ಸಂಸ್ಥೆಯ ದಳ ನಾಯಕರುಗಳು ಉಪಸ್ಥಿತರಿದ್ದರು.

Related posts

ಹಿಂದೂ ಧರ್ಮದ ವಿರುದ್ಧ ನೀಡಿರುವ ಹೇಳಿಕೆಗೆ ದ.ಕ. ಜಿಲ್ಲಾ ಶಿವಳ್ಳಿ ಬ್ರಾಹ್ಮಣ ಸಂಘ ಮತ್ತು ಸಮಗ್ರ ಹಿಂದೂ ಸಮಾಜ ಖಂಡನೆ: ಡಾ| ಎಂ.ಎಂ. ದಯಾಕರ್

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಾಗಾರ ; ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕ ಹರೀಶ್ ಪೂಂಜ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya
error: Content is protected !!