July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಜು.1ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಯಿತು.

ಭಾರತದಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಅದ್ಭುತ ಬದಲಾವಣೆ ತಂದದ್ದು ಜಿಎಸ್​ಟಿ ತೆರಿಗೆ. ಜುಲೈ 1 2017ರಂದು ಭಾರತದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಇವರು ಜಿಎಸ್​ಟಿಯನ್ನು ಉದ್ಘಾಟಿಸಿದರು. ಅದರ ಸವಿನೆನಪಿಗಾಗಿ ಪ್ರತಿ ವರ್ಷ ಜುಲೈ 1 ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಗುತ್ತದೆ. ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗ ಹಾಗೂ ಸ್ನಾತ್ತಕೋತ್ತರ ವಿಭಾಗದಿಂದ ಜಿಎಸ್ಟಿ ದಿನವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸ್ನಾತ್ತಕೋತ್ತರ ವಿದ್ಯಾರ್ಥಿಗಳಿಗೆ ಜಿ ಎಸ್ ಟಿ ವರವೋ ಶಾಪವೋ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಆಪ್ತ ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಡಾ| ರವಿ ಎಂ ಎನ್ ಇವರು ಪ್ರಸ್ತಾವನೆಗೆದರು. ಪ್ರೊಫೆಸರ್ ಸುರೇಶ್ ವಿ ಹಾಗೂ ಪ್ರೊಫೆಸರ್ ಪದ್ಮನಾಭ ಇವರು ಜಿಎಸ್‌ಟಿ ಮಹತ್ವ ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಕೆ ಅಧ್ಯಕ್ಷತೆ ವಹಿಸಿದರು. ಸ್ನಾತ್ತಕೋತ್ತರ ವಿಭಾಗದ ವಿದ್ಯಾರ್ಥಿಗಳಾದ ಕುಮಾರಿ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು ಕುಮಾರಿ ರಮ್ಯಾ ಸ್ವಾಗತಿಸಿ ಕುಮಾರಿ ಸುಚಿತ್ರ ವಂದಿಸಿದರು.

Related posts

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ತುಳುವರ ಬದುಕು, ಸಂಸ್ಕೃತಿ, ಸಂಘರ್ಷದ ಕಥಾನಕವೇ ಈ “ದಸ್ಕತ್”ಡಿಸೆಂಬರ್ 13 ರಂದು ಬಿಡುಗಡೆ,

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ 27ನೇ ಆಲಂಕಾರು ಶಾಖೆ ಉದ್ಘಾಟನೆ

Suddi Udaya

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya
error: Content is protected !!