July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

ಮುಂಡಾಜೆ: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ )ಇದರ ಆಡಳಿತಕ್ಕೆ ಒಳಪಟ್ಟ ಮುಂಡಾಜೆ ಪ್ರೌಢಶಾಲೆ ಮುಂಡಾಜೆ( ಅನುದಾನಿತ) ಇಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದ ಪರಿಕಲ್ಪನೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮವನ್ನು ಜೂ.30ರರಂದು ನಡೆಸಲಾಯಿತು.

ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯ ಚಂದ್ರ ಶ್ರೀಮಾನ್ ತುಳಸಿ ಗಿಡ ನೆಟ್ಟು ನೀರು ಹಾಕುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು ಔಷಧೀಯ ಗಿಡಗಳ ಮಹತ್ವದ ಬಗ್ಗೆ ತಿಳಿಸಿ, ಔಷಧೀಯ ಗಿಡಗಳನ್ನು ಗುರುತಿಸಿ ಅವುಗಳನ್ನು ಪೋಷಿಸಿ,ರಕ್ಷಿಸುವ ಕೆಲಸವನ್ನು ಎಲ್ಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಮನೆಗಳಲ್ಲಿ ಮಾಡಬೇಕು ಎಂದು ತಿಳಿಸಿದರು.

ಅಧ್ಯಾಪಕಸುರೇಶ್ ಎಂ.ಟಿ ಸ್ವಾಗತಿಸಿ ,ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಜಯಂತಿ ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಿಕ್ಷಣ ಸಂಸ್ಥೆಯ ಎಲ್ಲಾ ಅಧ್ಯಾಪಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು.

Related posts

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿಜೃಂಭಣೆಯ ಎಕ್ಸೆಲ್ ಪರ್ಬ, ಪ್ರತಿಭಾ ಪುರಸ್ಕಾರ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya
error: Content is protected !!