37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

ಬೆಳ್ತಂಗಡಿ: ಸರಕಾರದ ವಿವಿಧ ಯೋಜನೆಗಳನ್ನು ತಾಲೂಕಿನ ಜನರಿಗೆ ಮುಟ್ಟಿಸುವುದಲ್ಲದೇ ಜನರ ಬೇಡಿಕೆ ಆಶೋತ್ತರಗಳನ್ನು ಬಗೆಹರಿಸುವ ಶ್ರಮಿಕ ಕಛೇರಿ ಶ್ರಮಜೀವಿಗಳ ಬಾಳಲ್ಲಿ ಬೆಳಕಾಗಿ ಮೂಡಿಬರಲಿ ಎಂದು ಬಿಜೆಪಿ ಪ್ರಭಾರಿ ಹರಿಕೃಷ್ಣ ಬಂಟ್ವಾಳ ಹೇಳಿದರು.

ಅವರು ಜು. 2 ರಂದು ಬೆಳ್ತಂಗಡಿಯ ಶಾಸಕರ ಕಛೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಕಳೆದ ಅವಧಿಯಲ್ಲಿ ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಮಾಡಿದ ಅಭೂತಪೂರ್ವ ಅಭಿವೃದ್ಧಿಯಿಂದಾಗಿ ಅತ್ಯಧಿಕ ಮತಗಳಿಂದ ಎರಡನೇ ಬಾರಿಗೆ ಮತ್ತೊಮ್ಮೆ ಹರೀಶ್ ಪೂಂಜ ಅವರನ್ನು ಜನರು ಆಶೀರ್ವದಿಸಿದ್ದಾರೆ.ತಾಲೂಕಿನ ಪ್ರತಿ ಮನೆಗಳ ಮನೆ ಮಗನಾಗಿ ಬೆಳೆದು ಇಡೀ ರಾಜ್ಯದಲ್ಲೇ ಬೆಳ್ತಂಗಡಿ ತಾಲೂಕನ್ನು ಮಾದರಿಯನ್ನಾಗಿಸಿರುವ ಶಾಸಕ ಹರೀಶ್ ಪೂಂಜ ಮತ್ತೊಮ್ಮೆ ತಾಲೂಕಿನ ಶಾಸಕರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ.

ಮುಂದಿನ ದಿನಗಳಲ್ಲೂ ಇನ್ನಷ್ಟೂ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಅವರ ಯೋಜನೆ ಯೋಚನೆಗಳನ್ನು ಈಡೇರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದರು. ಮಾಜಿ ಶಾಸಕ ಪ್ರಭಾಕರ ಬಂಗೇರ ಕಛೇರಿಯನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಸುಬ್ರಹ್ಮಣ್ಯ ಅಗರ್ತ, ಪ್ರಮುಖರಾದ ಕೊರಗಪ್ಪ ನಾಯ್ಕ, ಕುಶಾಲಪ್ಪ ಗೌಡ, ಜಯಂತ ಗೌಡ, ಚೆನ್ನಕೇಶವ, ಬಾಲಕೃಷ್ಣ ಶೆಟ್ಟಿ ಸವಣಾಲು, ಪ್ರಶಾಂತ್ ಪಾರೆಂಕಿ, ಗಣೇಶ್ ಗೌಡ ನಾವೂರು, ಸೀತಾರಾಮ್ ಬೆಳಾಲ್, ರಾಜೇಶ್ ನವಶಕ್ತಿ,ಸೋಮನಾಥ ಬಂಗೇರ ವರ್ಪಾಳೆ, ಸದಾನಂದ ಪೂಜಾರಿ ಉಂಗೀಲಬೈಲು, ಶ್ರೀನಿವಾಸ್ ರಾವ್ ಧರ್ಮಸ್ಥಳ, ಶಾಸಕರ ತಂದೆ- ತಾಯಿ, ಪತ್ನಿ, ಮಕ್ಕಳು, ಸೇರಿದಂತೆ ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರುಗಳು ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಹಾಗೂ ಹಿತೈಷಿಗಳನ್ನು ಶಾಸಕ ಹರೀಶ್ ಪೂಂಜ ಸ್ವಾಗತಿಸಿ ಆತ್ಮೀಯವಾಗಿ ಬರಮಾಡಿಕೊಂಡರು.ಕಾರ್ಯದರ್ಶಿ ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

Related posts

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya
error: Content is protected !!