32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಹರೀಶ್ ಪೂಂಜರವರಿಗೆ ಯುವಶಕ್ತಿ ಫ್ರೆಂಡ್ಸ್ ಕ್ಲಬ್ ನಾಲ್ಕೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರಾವಾರ್ಪಣೆಯನ್ನು ಶ್ರಮಿಕ ಕಚೇರಿಯಲ್ಲಿ ಜು. 2 ರಂದು ಸಲ್ಲಿಸಲಾಯಿತು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹಿಂದಿನ ಅವಧಿಯಲ್ಲಿ ಶಾಸಕ ಹರೀಶ್ ಪೂಂಜರವರು ಹೆಚ್ಚಿನ ಅನುದಾನ ನೀಡಿ ಸಹಕರಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವಂತೆ ಶಾಸಕರಲ್ಲಿ ಮನವಿ ಸಲ್ಲಿಸಲಾಯಿತು.ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆ ಕಳೆದ ಕೆಲ ಸಮಯದಿಂದ ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿದ್ದು ಕ್ಲಬ್ ನ ಅಭಿವೃದ್ಧಿಗೆ ಸಹಕರಿಸುವಂತೆ ಶಾಸಕರಲ್ಲಿ ಕೇಳಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಯುವಶಕ್ತಿ ಫ್ರೆಂಡ್ಸ್ ತಂಡದ ಪ್ರಮುಖರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ,ಕರುಣಾಕರ ಹೆಗ್ಡೆ ಬೊಕ್ಕಸ,ಜಗದೀಶ್ ಕೋಟ್ಯಾನ್ ತಾರಿಪಡ್ಪು,ಪ್ರವೀಣ್ ಕೋಟ್ಯಾನ್ ದರ್ಖಾಸು, ಸಂಪತ್ ಕೋಟ್ಯಾನ್ ಪುಣ್ಕೆದೊಟ್ಟು, ಶರತ್ ಅಂಚನ್ ಬಾಕ್ಯರಡ್ಡ, ರಂಜಿತ್ ಪೂಜಾರಿ ಮಜಲಡ್ಡ, ಸುದೀಶ್ ತಾರಿಪಡ್ಪು,ಪ್ರಣಾಮ್ ಶೆಟ್ಟಿ ನಾಲ್ಕೂರು ಉಪಸ್ಥಿತರಿದ್ದರು.ಯೋಗೀಶ್ ಆರ್ ಯೈಕುರಿ,ಯತೀಶ್ ಕೋಟ್ಯಾನ್ ಬಳಂಜ, ವಿಜಯ ಪೂಜಾರಿ ಯೈಕುರಿ,ಸಂತೋಷ್ ಕೋಟ್ಯಾನ್ ಹಿಮರಡ್ಡ, ಚಂದ್ರಹಾಸ ಬಳಂಜ,ರಕ್ಷಿತ್ ಪೂಜಾರಿ ಬಗ್ಯೋಟ್ಟು,ಪ್ರಶಾಂತ್ ಮಜಲೋಡಿ, ಸುದೀರ್ ಮಜಲೋಡಿ,ಪ್ರಸಾದ್ ದರ್ಖಾಸು,ಪ್ರಶಾಂತ್ ದರ್ಖಾಸು,ಮಹೇಶ್ ನಾಲ್ಕೂರು,ಪ್ರಥಮ್ ಸಾಲಿಯಾನ್ ಸಹಕರಿಸಿದರು.

Related posts

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!