ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ, ಕೊರಂಜ, ಪರಪ್ಪು, ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕುತ್ತಿರುವ ಬಗ್ಗೆ ಬಂದ ದೂರಿನ ಆಧಾರದಲ್ಲಿ ಇವತ್ತು ಈ ಪ್ರದೇಶಕ್ಕೆ ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಧಿಡೀರ್ ಬೇಟಿ ನೀಡಿ ಪರಿಶೀಲಿಸಿದರು.

ಮನೆ ಬಾಡಿಗೆ ನೀಡುತ್ತಿರುವ ಮಾಲಿಕರಿಗೆ ಎಚ್ಚರಿಕೆ ನೀಡಿ, ಮುಂದಕ್ಕೆ ಎಲ್ಲೆಂದರಲ್ಲಿ ಎಸೆದರೆ ದಂಡ ವಿಧಿಸುವುದಾಗಿ ತಿಳಿಸಿದರು. ಕಾರ್ಯದರ್ಶಿ ಕುಂಞ ಕೆ, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಯಶೋಧರ ಶೆಟ್ಟಿ,ಕರುಣಾಕರ ಶೆಟ್ಟಿ ಕೊರಂಜ, ಪಂಚಾಯತ್ ಸಿಬ್ಬಂದಿ ರವಿ ಎಚ್ ಉಪಸ್ಥಿತರಿದ್ದರು.

Leave a Comment

error: Content is protected !!