April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

ಬೆಳ್ತಂಗಡಿ: ಸರಕಾರದ ವಿವಿಧ ಯೋಜನೆಗಳನ್ನು ತಾಲೂಕಿನ ಜನರಿಗೆ ಮುಟ್ಟಿಸುವುದಲ್ಲದೇ ಜನರ ಬೇಡಿಕೆ ಆಶೋತ್ತರಗಳನ್ನು ಬಗೆಹರಿಸುವ ಶ್ರಮಿಕ ಕಛೇರಿ ಶ್ರಮಜೀವಿಗಳ ಬಾಳಲ್ಲಿ ಬೆಳಕಾಗಿ ಮೂಡಿಬರಲಿ ಎಂದು ಬಿಜೆಪಿ ಪ್ರಭಾರಿ ಹರಿಕೃಷ್ಣ ಬಂಟ್ವಾಳ ಹೇಳಿದರು.

ಅವರು ಜು. 2 ರಂದು ಬೆಳ್ತಂಗಡಿಯ ಶಾಸಕರ ಕಛೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಕಳೆದ ಅವಧಿಯಲ್ಲಿ ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಮಾಡಿದ ಅಭೂತಪೂರ್ವ ಅಭಿವೃದ್ಧಿಯಿಂದಾಗಿ ಅತ್ಯಧಿಕ ಮತಗಳಿಂದ ಎರಡನೇ ಬಾರಿಗೆ ಮತ್ತೊಮ್ಮೆ ಹರೀಶ್ ಪೂಂಜ ಅವರನ್ನು ಜನರು ಆಶೀರ್ವದಿಸಿದ್ದಾರೆ.ತಾಲೂಕಿನ ಪ್ರತಿ ಮನೆಗಳ ಮನೆ ಮಗನಾಗಿ ಬೆಳೆದು ಇಡೀ ರಾಜ್ಯದಲ್ಲೇ ಬೆಳ್ತಂಗಡಿ ತಾಲೂಕನ್ನು ಮಾದರಿಯನ್ನಾಗಿಸಿರುವ ಶಾಸಕ ಹರೀಶ್ ಪೂಂಜ ಮತ್ತೊಮ್ಮೆ ತಾಲೂಕಿನ ಶಾಸಕರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ.

ಮುಂದಿನ ದಿನಗಳಲ್ಲೂ ಇನ್ನಷ್ಟೂ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಅವರ ಯೋಜನೆ ಯೋಚನೆಗಳನ್ನು ಈಡೇರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದರು. ಮಾಜಿ ಶಾಸಕ ಪ್ರಭಾಕರ ಬಂಗೇರ ಕಛೇರಿಯನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಸುಬ್ರಹ್ಮಣ್ಯ ಅಗರ್ತ, ಪ್ರಮುಖರಾದ ಕೊರಗಪ್ಪ ನಾಯ್ಕ, ಕುಶಾಲಪ್ಪ ಗೌಡ, ಜಯಂತ ಗೌಡ, ಚೆನ್ನಕೇಶವ, ಬಾಲಕೃಷ್ಣ ಶೆಟ್ಟಿ ಸವಣಾಲು, ಪ್ರಶಾಂತ್ ಪಾರೆಂಕಿ, ಗಣೇಶ್ ಗೌಡ ನಾವೂರು, ಸೀತಾರಾಮ್ ಬೆಳಾಲ್, ರಾಜೇಶ್ ನವಶಕ್ತಿ,ಸೋಮನಾಥ ಬಂಗೇರ ವರ್ಪಾಳೆ, ಸದಾನಂದ ಪೂಜಾರಿ ಉಂಗೀಲಬೈಲು, ಶ್ರೀನಿವಾಸ್ ರಾವ್ ಧರ್ಮಸ್ಥಳ, ಶಾಸಕರ ತಂದೆ- ತಾಯಿ, ಪತ್ನಿ, ಮಕ್ಕಳು, ಸೇರಿದಂತೆ ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರುಗಳು ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಹಾಗೂ ಹಿತೈಷಿಗಳನ್ನು ಶಾಸಕ ಹರೀಶ್ ಪೂಂಜ ಸ್ವಾಗತಿಸಿ ಆತ್ಮೀಯವಾಗಿ ಬರಮಾಡಿಕೊಂಡರು.ಕಾರ್ಯದರ್ಶಿ ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

Related posts

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya
error: Content is protected !!