ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

ಬೆಳ್ತಂಗಡಿ: ಸರಕಾರದ ವಿವಿಧ ಯೋಜನೆಗಳನ್ನು ತಾಲೂಕಿನ ಜನರಿಗೆ ಮುಟ್ಟಿಸುವುದಲ್ಲದೇ ಜನರ ಬೇಡಿಕೆ ಆಶೋತ್ತರಗಳನ್ನು ಬಗೆಹರಿಸುವ ಶ್ರಮಿಕ ಕಛೇರಿ ಶ್ರಮಜೀವಿಗಳ ಬಾಳಲ್ಲಿ ಬೆಳಕಾಗಿ ಮೂಡಿಬರಲಿ ಎಂದು ಬಿಜೆಪಿ ಪ್ರಭಾರಿ ಹರಿಕೃಷ್ಣ ಬಂಟ್ವಾಳ ಹೇಳಿದರು.

ಅವರು ಜು. 2 ರಂದು ಬೆಳ್ತಂಗಡಿಯ ಶಾಸಕರ ಕಛೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಹಾರೈಸಿದರು. ಕಳೆದ ಅವಧಿಯಲ್ಲಿ ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ಮಾಡಿದ ಅಭೂತಪೂರ್ವ ಅಭಿವೃದ್ಧಿಯಿಂದಾಗಿ ಅತ್ಯಧಿಕ ಮತಗಳಿಂದ ಎರಡನೇ ಬಾರಿಗೆ ಮತ್ತೊಮ್ಮೆ ಹರೀಶ್ ಪೂಂಜ ಅವರನ್ನು ಜನರು ಆಶೀರ್ವದಿಸಿದ್ದಾರೆ.ತಾಲೂಕಿನ ಪ್ರತಿ ಮನೆಗಳ ಮನೆ ಮಗನಾಗಿ ಬೆಳೆದು ಇಡೀ ರಾಜ್ಯದಲ್ಲೇ ಬೆಳ್ತಂಗಡಿ ತಾಲೂಕನ್ನು ಮಾದರಿಯನ್ನಾಗಿಸಿರುವ ಶಾಸಕ ಹರೀಶ್ ಪೂಂಜ ಮತ್ತೊಮ್ಮೆ ತಾಲೂಕಿನ ಶಾಸಕರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯಾಗಿದೆ.

ಮುಂದಿನ ದಿನಗಳಲ್ಲೂ ಇನ್ನಷ್ಟೂ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಅವರ ಯೋಜನೆ ಯೋಚನೆಗಳನ್ನು ಈಡೇರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದರು. ಮಾಜಿ ಶಾಸಕ ಪ್ರಭಾಕರ ಬಂಗೇರ ಕಛೇರಿಯನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಸುಬ್ರಹ್ಮಣ್ಯ ಅಗರ್ತ, ಪ್ರಮುಖರಾದ ಕೊರಗಪ್ಪ ನಾಯ್ಕ, ಕುಶಾಲಪ್ಪ ಗೌಡ, ಜಯಂತ ಗೌಡ, ಚೆನ್ನಕೇಶವ, ಬಾಲಕೃಷ್ಣ ಶೆಟ್ಟಿ ಸವಣಾಲು, ಪ್ರಶಾಂತ್ ಪಾರೆಂಕಿ, ಗಣೇಶ್ ಗೌಡ ನಾವೂರು, ಸೀತಾರಾಮ್ ಬೆಳಾಲ್, ರಾಜೇಶ್ ನವಶಕ್ತಿ,ಸೋಮನಾಥ ಬಂಗೇರ ವರ್ಪಾಳೆ, ಸದಾನಂದ ಪೂಜಾರಿ ಉಂಗೀಲಬೈಲು, ಶ್ರೀನಿವಾಸ್ ರಾವ್ ಧರ್ಮಸ್ಥಳ, ಶಾಸಕರ ತಂದೆ- ತಾಯಿ, ಪತ್ನಿ, ಮಕ್ಕಳು, ಸೇರಿದಂತೆ ಪಂಚಾಯತ್ ಅಧ್ಯಕ್ಷರುಗಳು, ಸದಸ್ಯರುಗಳು ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಹಾಗೂ ಹಿತೈಷಿಗಳನ್ನು ಶಾಸಕ ಹರೀಶ್ ಪೂಂಜ ಸ್ವಾಗತಿಸಿ ಆತ್ಮೀಯವಾಗಿ ಬರಮಾಡಿಕೊಂಡರು.ಕಾರ್ಯದರ್ಶಿ ಶ್ರೀನಿವಾಸ್ ರಾವ್ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ಆಂಧ್ರಪ್ರದೇಶ ಸಂಸದ ಮಿಧುನ್ ರೆಡ್ಡಿ ಪಿ.ವಿ. ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ಹಾಗೂ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ

Suddi Udaya
error: Content is protected !!