25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

ಉಜಿರೆ: ಕಲಿಕೆ ಎಂಬುದು ವಿದ್ಯಾರ್ಥಿ ಆದಾಗ ಮಾತ್ರ ಆರಂಭವಾಗುವುದಲ್ಲ ಹುಟ್ಟಿನಿಂದಲೇ ಆರಂಭವಾಗುತ್ತದೆ ಮನುಷ್ಯನಿಗೆ ಜೀವನ ಶಿಕ್ಷಣ ಅತಿ ಅಗತ್ಯ ಜೀವನವನ್ನು ಬಂದಂತೆ ಸ್ವೀಕರಿಸಿ ಜೀವನದ ಪಾಠ ಕಲಿಬೇಕು ಎಂದಾದರೆ ನಾಲ್ಕು ಊರು ಸುತ್ತಬೇಕು. ನಿಂತ ನೀರು ಕೊಳಚೆಯಾಗಿರುತ್ತೆ ಆದ್ರೆ ಹರಿಯುವ ನೀರು ಶುಭ್ರವಾಗಿರುತ್ತದೆ. ಕನಸನ್ನು ಕಾಣುವುದು ಮುಖ್ಯವಲ್ಲ ಅದನ್ನು ನನಸಾಗಿಸುವುದು ಮುಖ್ಯ ಅದಕ್ಕಾಗಿ ಛಲ ಮುಖ್ಯ. ಗೆದ್ದವ ಸಾಧಕನಾಗುತ್ತಾನೆ. ಸೋತವ ಮಾರ್ಗದರ್ಶನಾಗುತ್ತಾನೆ ಅದಕ್ಕಾಗಿ ಸಾಧ್ಯವಾದಷ್ಟು ಕಲಿಯಿರಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳದ ಶ್ರೀನಿವಾಸ್ ಪೂಜಾರಿಯವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಉಜಿರೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅವರು ತಮ್ಮ ಅತಿಥಿ ಭಾಷಣದ ಮೂಲಕ ವಿದ್ಯಾರ್ಥಿನಿಯರಿಗೆ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಉಜಿರೆಯ ಸಂಧ್ಯಾ ಫ್ರೆಶ್ ನ ಮಾಲೀಕರಾದ ಶ್ರೀಮತಿ ಅರ್ಚನಾ ರಾಜೇಶ್ ಪೈ ಇವರು ಜೀವನ ಕೌಶಲ್ಯವಿದ್ದರೆ ಜೀವನದಲ್ಲಿ ಯಶಸ್ಸು ಗ್ಯಾರಂಟಿ ಅದಕ್ಕಾಗಿ ಆತ್ಮವಿಶ್ವಾಸ ಮತ್ತು ಮನೆಯವರ ಸಹಕಾರ ಅಗತ್ಯ ಸ್ವ ಉದ್ಯೋಗ ಅತಿ ಉತ್ತಮ ಹುಟ್ಟು/ಸಾವು ಯಾರು ಕೈಯಲ್ಲಿ ಇಲ್ಲ ಆದರೆ ಹುಟ್ಟುವಾಗ ಬಡವನಾದರು ಸಾಯುವಾಗ ಶ್ರೀಮಂತರಾಗಿ ಸಾಯಬೇಕು. ಅದಕ್ಕಾಗಿ ಪರಿಶ್ರಮ ಅಗತ್ಯ ಸಾಧ್ಯವಾದಷ್ಟು ಹೊಂದಾಣಿಕೆ ಮಾಡಿಕೊಂಡು ಜೀವನ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಪ್ರಾಂಶುಪಾಲರಾದ ವಿ ಪ್ರಕಾಶ್ ಕಾಮತ್ ವಿದ್ಯಾರ್ಥಿನಿಯರ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಿಗೆ ಕೋರ್ಸ್ ಕಂಪ್ಲೀಟ್ ಸರ್ಟಿಫಿಕೇಟ್ ನೀಡಲಾಯಿತು ಮತ್ತು ಕೆಲವು ವಿದ್ಯಾರ್ಥಿನಿಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕು. ಮೇಘನಾ ನಿರ್ವಹಿಸಿದ ಈ ಕಾರ್ಯಕ್ರಮದಲ್ಲಿ ಕು ಸಮೀಕ್ಷಾ ವಂದಿಸಿದರು.

Related posts

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya
error: Content is protected !!