July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ


ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದ ಅಪರಿಚಿತ ವ್ಯಕ್ತಿಯೋರ್ವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸ್ ರು ಹುಡುಕಾಟ ನಡೆಸುತ್ತಿದ್ದಾರೆ.

ಧರ್ಮಸ್ಥಳ ದೇವಸ್ಥಾನದ ಮಾಹಿತಿ ಕಛೇರಿಯಲ್ಲಿ, ಸ್ವಚ್ಛತಾ ವಿಭಾಗದಲ್ಲಿ ರಾತ್ರಿ ಪಾಳಿ ಕೆಲಸ ಮಾಡಿಕೊಂಡಿದ್ದು ವ್ಯಕ್ತಿಯೊಬ್ಬರು ಜೂ.30 ರಂದು ರಾತ್ರಿ ಮಾಹಿತಿ ಕಚೇರಿಯ ಬಳಿ ಇರುವ ಮೆಟ್ಟಿಲಿನ ಬಳಿ ಸುಮಾರು 45 ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಅಸ್ವಸ್ಥರಾಗಿ ಮಾತನಾಡಲು ಕಷ್ಟವಾಗುತ್ತಿರುವುದನ್ನು ಕಂಡು ಕೂಡಲೇ ಅವರು ಕೆಲಸ ಮಾಡುತ್ತಿದ್ದ ಕಚೇರಿಯಿಂದ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಸದ್ರಿ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಮಯ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾರೀಸುದಾರರ ಪತ್ತೆಗಾಗಿ ಮನವಿ ಮಾಡಿದ್ದಾರೆ.

Related posts

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ಅಳದಂಗಡಿ ವಲಯ ಅರಣ್ಯದಲ್ಲಿ ಹಣ್ಣು ಹಂಪಲುಗಳ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!