September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ


ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದ ಅಪರಿಚಿತ ವ್ಯಕ್ತಿಯೋರ್ವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸ್ ರು ಹುಡುಕಾಟ ನಡೆಸುತ್ತಿದ್ದಾರೆ.

ಧರ್ಮಸ್ಥಳ ದೇವಸ್ಥಾನದ ಮಾಹಿತಿ ಕಛೇರಿಯಲ್ಲಿ, ಸ್ವಚ್ಛತಾ ವಿಭಾಗದಲ್ಲಿ ರಾತ್ರಿ ಪಾಳಿ ಕೆಲಸ ಮಾಡಿಕೊಂಡಿದ್ದು ವ್ಯಕ್ತಿಯೊಬ್ಬರು ಜೂ.30 ರಂದು ರಾತ್ರಿ ಮಾಹಿತಿ ಕಚೇರಿಯ ಬಳಿ ಇರುವ ಮೆಟ್ಟಿಲಿನ ಬಳಿ ಸುಮಾರು 45 ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಅಸ್ವಸ್ಥರಾಗಿ ಮಾತನಾಡಲು ಕಷ್ಟವಾಗುತ್ತಿರುವುದನ್ನು ಕಂಡು ಕೂಡಲೇ ಅವರು ಕೆಲಸ ಮಾಡುತ್ತಿದ್ದ ಕಚೇರಿಯಿಂದ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಸದ್ರಿ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಮಯ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾರೀಸುದಾರರ ಪತ್ತೆಗಾಗಿ ಮನವಿ ಮಾಡಿದ್ದಾರೆ.

Related posts

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವ; ಮೇ 30: ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya
error: Content is protected !!