Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ನಡ: ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ( ಚೈಲ್ಡ್ ರೈಟ್ಸ್ ಕ್ಲಬ್) ನ್ನು ಜು.3 ರಂದು ಉದ್ಘಾಟಿಸಲಾಯಿತು.

ಸಂಘದ ಉದ್ಘಾಟನೆಯನ್ನು ಚೈಲ್ಡ್ ರೈಟ್ಟ್ಸ್ ಇದರ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಕುಮಾರ್ ನೆರವೇರಿಸಿ ಸಂಘದ ಕರ್ತವ್ಯಗಳ ಬಗ್ಗೆ ವಿವರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ವಹಿಸಿದ್ದರು.

ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಮಕ್ಕಳ ಹಕ್ಕುಗಳ ಸಂಘದ ಮೂಲಕ ಹೇಗೆ ಪ್ರಶ್ನಿಸಬಹುದು ಎಂಬ ಬಗ್ಗೆ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮಕ್ಕಳ ಹಕ್ಕುಗಳ ಸಂಘದ ಮಾರ್ಗದರ್ಶಿ ಶಿಕ್ಷಕ ಮೋಹನ ಬಾಬು ಡಿ ಇವರು ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಮಾಜ ವಿಜ್ಞಾನ ಶಿಕ್ಷಕ ಶಿವಪುತ್ರ ಸುಣಗಾರ ಉಪಸ್ಥಿರಿದ್ದರು. ಸಭೆಯಲ್ಲಿ ಮಕ್ಕಳ ಹಕ್ಕಗಳ ಕೈಪಿಡಿ ಪುಸ್ತಕವನ್ನು ಸಂಘದ 22 ಸದಸ್ಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ನಂತರ ನಡೆದ ಸಂಘದ ಸಭೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಚರ್ಚಿಸಲಾಯಿತು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಬಳಂಜ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!