July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಬಂದಾರು ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ 2023-2024ನೇ ವಿದ್ಯಾರ್ಥಿ ಸಂಘವನ್ನು ಸರ್ಕಾರಿ ಪ್ರೌಢ ಶಾಲೆ ಕೊಯ್ಯೂರು ಇಲ್ಲಿಯ ಮುಖ್ಯೋಪಾಧ್ಯಾಯರಾದ ರಾಧಾಕೃಷ್ಣ ತಚ್ಚಮೆ ಉದ್ಘಾಟಿಸಿ ಮಾತನಾಡುತ್ತಾ ಭಾರತದಂತಹ ವಿಶಾಲ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಪ್ರತಿಯೊಬ್ಬ ಭಾರತೀಯನಿಗೂ ನಮ್ಮ ನಾಡು ನುಡಿಯ ಬಗ್ಗೆ ಅಭಿಮಾನ , ಗೌರವ ಇರಬೇಕು.


ಶಾಲೆಗಳಲ್ಲಿ ವಿದ್ಯಾರ್ಥಿ ಸಂಘಕ್ಕೆ ಚುನಾವಣೆಯ ಮೂಲಕ ನಾಯಕನನ್ನು ಆರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಸ್ಪರ್ಧೆ ಉಂಟಾಗಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುವುದೆಂದು ಹೇಳಿದರು. ಸಭೆಯ ಅಧ್ಯಕ್ಷತೆಯನ್ನು ಮುಖ್ಯ ಅಧ್ಯಾಪಕ ಬಾಲಕೃಷ್ಣ ಕೊರಮೇರು ವಹಿಸಿ ಶುಭ ಹಾರೈಸಿದರು.

ಅಧ್ಯಾಪಕರಾದ ವಿಜಯ ಕುಮಾರ್ ಎಂ ಕೊಯ್ಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾನಾಯಕಿ ಆದಿ ಸಹಪಾಠಿಗಳ ಸಹಕಾರದಿಂದ ಒಳ್ಳೆಯ ರೀತಿಯಲ್ಲಿ ಶಾಲೆಯ ಕೆಲಸಗಳನ್ನು ನಿರ್ವಹಿಸುತ್ತೇನೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಧ್ಯಾಪಕರುಗಳಾದ ಕೊರಗಪ್ಪ, ವಿವೇಕಾನಂದಗೌಡ , ಮಹೇಶ್ ಎ. ಶ್ರೀಮತಿ ಹೇಮಲತಾ, ದೀಕ್ಷಾ ಮತ್ತು ಉಪನಾಯಕ ದೀಕ್ಷಿತ್ ಉಪಸ್ಥಿತರಿದ್ದರು.

9ನೇ ತರಗತಿ ವಿದ್ಯಾರ್ಥಿನಿಯರಿಂದ ಆರಂಭವಾದ ಕಾರ್ಯಕ್ರಮದ ನಿರ್ವಹಣೆಯನ್ನು 10ನೇ ತರಗತಿ ವಿದ್ಯಾರ್ಥಿನಿಯರಾದ ಅವ್ಯ ಜಯಶ್ರೀ, ಅನನ್ಯ ನಿರ್ವಹಿಸಿ, ಪ್ರತಿಪಕ್ಷದ ನಾಯಕ ಶ್ರವಣ್ ಗೌಡ ಧನ್ಯವಾದವಿತ್ತರು.

Related posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಚನ್ನಕ್ಕ ನಿಧನ

Suddi Udaya

ಅತ್ಯುತ್ತಮ ಸೇವೆಗೆ ಹೆಸರುವಾಸಿ ಗುರುವಾಯನಕೆರೆಯ ಹೋಟೆಲ್ ರೇಸ್ ಇನ್

Suddi Udaya

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya
error: Content is protected !!