April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯಲ್ಲಿ ಜು1 ರಂದು ಅಖಿಲ ಭಾರತ ಸಾಹಿತ್ಯ ಪರಿಷತ್, ಕರ್ನಾಟಕ ಇದರ ಬೆಳ್ತಂಗಡಿ ತಾಲೂಕು ಸಮಿತಿಯ ಆಶ್ರಯದಲ್ಲಿ “ಶುಚಿ ಜೀವನ ದರ್ಶನ” ಎಂಬ ವಿಷಯದ ಕುರಿತು ಚಿಂತನ ಕಾರ್ಯಕ್ರಮ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಭರತೇಶ ಶೆಟ್ಟಿ , ಎಕ್ಕಾರು ಆಗಮಿಸಿ ವಿದ್ಯಾರ್ಥಿಗಳಿಗೆ ಪೌರಾಣಿಕ ಪಾತ್ರ ಗಳ ಉದಾಹರಣೆ ಯೊಂದಿಗೆ ಆದರ್ಶ ವ್ಯಕ್ತಿಯಾಗಿ ಹೇಗೆ ಬಾಳಬೇಕು ಎಂಬ ಜೀವನ ಮೌಲ್ಯ ಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ ,ಇದರ ಬೆಳ್ತಂಗಡಿ ಸಮಿತಿಯ ಅಧ್ಯಕ್ಷ ಗಣಪತಿ ಕುಳಮರ್ವ ಸ್ವಾಗತಿಸಿದರು.

ಸುಂದರ ಶೆಟ್ಟಿ ಇವರು ಪ್ರಾಸ್ತಾವಿಕ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ವಹಿಸಿದ್ದರು. ಶ್ರೀಮತಿ ಸುಭಾಶಿಣಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ಸದಸ್ಯರು ಶಿಕ್ಷಕ ವೃಂದದವರು ಭಾಗಿಯಾಗಿದ್ದರು.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya
error: Content is protected !!