September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ


ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದ ಅಪರಿಚಿತ ವ್ಯಕ್ತಿಯೋರ್ವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸ್ ರು ಹುಡುಕಾಟ ನಡೆಸುತ್ತಿದ್ದಾರೆ.

ಧರ್ಮಸ್ಥಳ ದೇವಸ್ಥಾನದ ಮಾಹಿತಿ ಕಛೇರಿಯಲ್ಲಿ, ಸ್ವಚ್ಛತಾ ವಿಭಾಗದಲ್ಲಿ ರಾತ್ರಿ ಪಾಳಿ ಕೆಲಸ ಮಾಡಿಕೊಂಡಿದ್ದು ವ್ಯಕ್ತಿಯೊಬ್ಬರು ಜೂ.30 ರಂದು ರಾತ್ರಿ ಮಾಹಿತಿ ಕಚೇರಿಯ ಬಳಿ ಇರುವ ಮೆಟ್ಟಿಲಿನ ಬಳಿ ಸುಮಾರು 45 ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಅಸ್ವಸ್ಥರಾಗಿ ಮಾತನಾಡಲು ಕಷ್ಟವಾಗುತ್ತಿರುವುದನ್ನು ಕಂಡು ಕೂಡಲೇ ಅವರು ಕೆಲಸ ಮಾಡುತ್ತಿದ್ದ ಕಚೇರಿಯಿಂದ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಸದ್ರಿ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಮಯ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾರೀಸುದಾರರ ಪತ್ತೆಗಾಗಿ ಮನವಿ ಮಾಡಿದ್ದಾರೆ.

Related posts

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜ.17 ಮಡಂತ್ಯಾರು ಜೆಸಿಐ ಪದ ಪ್ರಧಾನ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya
error: Content is protected !!