July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

ಬಂದಾರು ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ 2023-2024ನೇ ವಿದ್ಯಾರ್ಥಿ ಸಂಘವನ್ನು ಸರ್ಕಾರಿ ಪ್ರೌಢ ಶಾಲೆ ಕೊಯ್ಯೂರು ಇಲ್ಲಿಯ ಮುಖ್ಯೋಪಾಧ್ಯಾಯರಾದ ರಾಧಾಕೃಷ್ಣ ತಚ್ಚಮೆ ಉದ್ಘಾಟಿಸಿ ಮಾತನಾಡುತ್ತಾ ಭಾರತದಂತಹ ವಿಶಾಲ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಪ್ರತಿಯೊಬ್ಬ ಭಾರತೀಯನಿಗೂ ನಮ್ಮ ನಾಡು ನುಡಿಯ ಬಗ್ಗೆ ಅಭಿಮಾನ , ಗೌರವ ಇರಬೇಕು.


ಶಾಲೆಗಳಲ್ಲಿ ವಿದ್ಯಾರ್ಥಿ ಸಂಘಕ್ಕೆ ಚುನಾವಣೆಯ ಮೂಲಕ ನಾಯಕನನ್ನು ಆರಿಸುವುದರಿಂದ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಸ್ಪರ್ಧೆ ಉಂಟಾಗಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುವುದೆಂದು ಹೇಳಿದರು. ಸಭೆಯ ಅಧ್ಯಕ್ಷತೆಯನ್ನು ಮುಖ್ಯ ಅಧ್ಯಾಪಕ ಬಾಲಕೃಷ್ಣ ಕೊರಮೇರು ವಹಿಸಿ ಶುಭ ಹಾರೈಸಿದರು.

ಅಧ್ಯಾಪಕರಾದ ವಿಜಯ ಕುಮಾರ್ ಎಂ ಕೊಯ್ಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾನಾಯಕಿ ಆದಿ ಸಹಪಾಠಿಗಳ ಸಹಕಾರದಿಂದ ಒಳ್ಳೆಯ ರೀತಿಯಲ್ಲಿ ಶಾಲೆಯ ಕೆಲಸಗಳನ್ನು ನಿರ್ವಹಿಸುತ್ತೇನೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅಧ್ಯಾಪಕರುಗಳಾದ ಕೊರಗಪ್ಪ, ವಿವೇಕಾನಂದಗೌಡ , ಮಹೇಶ್ ಎ. ಶ್ರೀಮತಿ ಹೇಮಲತಾ, ದೀಕ್ಷಾ ಮತ್ತು ಉಪನಾಯಕ ದೀಕ್ಷಿತ್ ಉಪಸ್ಥಿತರಿದ್ದರು.

9ನೇ ತರಗತಿ ವಿದ್ಯಾರ್ಥಿನಿಯರಿಂದ ಆರಂಭವಾದ ಕಾರ್ಯಕ್ರಮದ ನಿರ್ವಹಣೆಯನ್ನು 10ನೇ ತರಗತಿ ವಿದ್ಯಾರ್ಥಿನಿಯರಾದ ಅವ್ಯ ಜಯಶ್ರೀ, ಅನನ್ಯ ನಿರ್ವಹಿಸಿ, ಪ್ರತಿಪಕ್ಷದ ನಾಯಕ ಶ್ರವಣ್ ಗೌಡ ಧನ್ಯವಾದವಿತ್ತರು.

Related posts

ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈ.ಲಿ. ನ ಸಿ.ಎಸ್.ಆರ್ ಅನುದಾನದಿಂದ ಸೇವಾಧಾಮದಲ್ಲಿ ಸೋಲಾರ್ ಅಳವಡಿಕೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಬೆಳ್ತಂಗಡಿ ಚಚ್೯ಕ್ರಾಸ್ ಬಳಿ ಹೊಸ ರಸ್ತೆಯಲ್ಲಿ ನಿಂತ ಮಳೆ ನೀರು

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!