24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

ಕನ್ಯಾಡಿ : ಕನ್ಯಾಡಿ (ಜಯನಗರ) ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು ಭಾನುವಾರ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಜರಗಿತು.
ಮುಂದಿನ ಐದು ವರ್ಷ ಅವಧಿಗೆ ಅಧ್ಯಕ್ಷರಾಗಿ ಸೌಮ್ಯಲತಾ ಜಯಂತಗೌಡ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದು ಸವಿತಾ ಪ್ರಭಾಕರ ಪೂಜಾರಿ 8-5 ಮತಗಳ ಅಂತರದಿಂದ ಜಯ ಗಳಿಸಿದರು.
ವಸಂತಿ ಕಾರಿಜೆ, ಜಲಜಾ ಮಾಳಿಗೆ ಮನೆ, ಸುನಂದಾ ಬನತ್ರೋಡಿ, ರತ್ನಾವತಿ ಮಾಳಿಗೆ ಮನೆ, ದೇವಕಿ ಶುಭಕರ ಪೂಜಾರಿ, ಮಲ್ಲಿಕಾ ರಘು ಶೆಟ್ಟಿ, ಲತಾ ಶೇಖರ ಆಚಾರ್ಯ, ಪ್ರೇಮಾ ಸತೀಶ ಗೌಡ, ಗೀತಾ ನವೀನ ಗೌಡ, ಕಮಲಾ ಪಕೀರ, ಗೀತಾ ವಿಠಲ ನಾಯ್ಕ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಅಭಿನಂದನಾ ಸಮಾರಂಭ

Suddi Udaya

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ ಸಂಸ್ಕಾರ ಭಾರತಿ ಮತ್ತು ಹನುಮೋತ್ಸವ ಸಮಿತಿ ಅಳದಂಗಡಿ ವತಿಯಿಂದ ಹನುಮೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!