25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

ಕನ್ಯಾಡಿ : ಕನ್ಯಾಡಿ (ಜಯನಗರ) ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆ ಇತ್ತೀಚೆಗೆ ನಡೆದಿದ್ದು ಭಾನುವಾರ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಜರಗಿತು.
ಮುಂದಿನ ಐದು ವರ್ಷ ಅವಧಿಗೆ ಅಧ್ಯಕ್ಷರಾಗಿ ಸೌಮ್ಯಲತಾ ಜಯಂತಗೌಡ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ನಾಮಪತ್ರ ಸಲ್ಲಿಸಿದ್ದು ಸವಿತಾ ಪ್ರಭಾಕರ ಪೂಜಾರಿ 8-5 ಮತಗಳ ಅಂತರದಿಂದ ಜಯ ಗಳಿಸಿದರು.
ವಸಂತಿ ಕಾರಿಜೆ, ಜಲಜಾ ಮಾಳಿಗೆ ಮನೆ, ಸುನಂದಾ ಬನತ್ರೋಡಿ, ರತ್ನಾವತಿ ಮಾಳಿಗೆ ಮನೆ, ದೇವಕಿ ಶುಭಕರ ಪೂಜಾರಿ, ಮಲ್ಲಿಕಾ ರಘು ಶೆಟ್ಟಿ, ಲತಾ ಶೇಖರ ಆಚಾರ್ಯ, ಪ್ರೇಮಾ ಸತೀಶ ಗೌಡ, ಗೀತಾ ನವೀನ ಗೌಡ, ಕಮಲಾ ಪಕೀರ, ಗೀತಾ ವಿಠಲ ನಾಯ್ಕ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಸುಳ್ಯ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

Related posts

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!