ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆಯು ಹಾಗೂ 41 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಜು.2ರಂದು ನಡೆಯಿತು.

ಮಾಜಿ ಅಧ್ಯಕ್ಷರಾದ ಕಾಂತಪ್ಪ ಗೌಡ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. 40 ನೇ ವರ್ಷದ ಲೆಕ್ಕಪತ್ರವನ್ನು ಮಂಡಿಸಲಾಯಿತು.

ನೂತನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಬಳ್ಳಮಂಜ, ಉಪಾಧ್ಯಕ್ಷರಾಗಿ ಪದ್ಮನಾಭ ಸುವರ್ಣ, ಕಾರ್ಯದರ್ಶಿಯಾಗಿ ಸಚಿನ್, ಜೊತೆ ಕಾರ್ಯದರ್ಶಿ ಶಂಕರ್ ಶೆಟ್ಟಿ, ಸೋಣಂದೂರು ಕೋಶಾಧಿಕಾರಿಯಾಗಿ ವೆಂಕಟ್ರಮಣ ಗೌಡ ಹೊಸಮನೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಉಮೇಶ್ ಸುವರ್ಣ ಸ್ವಾಗತಿಸಿ, ಸಚಿನ್ ಧನ್ಯವಾದವಿತ್ತರು.

Leave a Comment

error: Content is protected !!