ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವು ಜು.1ರಂದು ಜರಗಿತು.
ಕಾರ್ಯಕ್ರಮದ ಪ್ರಯುಕ್ತ ಕಾಲೇಜಿನ ವಿವಿಧ ಸಾಂಸ್ಕೃತಿಕ, ಸಾಹಿತ್ಯಕ, ಕ್ರೀಡಾ ಹಾಗೂ ಶೈಕ್ಷಣಿಕವಾಗಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಸಮಾರಂಭದ ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಪ್ರಸ್ತುತ ಬೆಂಗಳೂರಿನಲ್ಲಿ ಕಮರ್ಷಿಯಲ್ ಟ್ಯಾಕ್ಸ್ ವಿಭಾಗದ ಅಸಿಸ್ಟೆಂಟ್ ಕಮಿಷನರ್ ಆಗಿರುವ ಸೌಮ್ಯ ಬಾಪಟ್ ಅವರು ಭಾಗವಹಿಸಿ ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಅಭಿವ್ಯಕ್ತಿಗೊಳಿಸಲು ಸೂಕ್ತ ವೇದಿಕೆಯನ್ನು ಕಂಡುಕೊಂಡು ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬೇಕು ಹಾಗೂ ಉಜಿರೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೂರಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ. ಎ. ಕುಮಾರ ಹೆಗ್ಡೆ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಇರುವ ವಿಪುಲ ಅವಕಾಶಗಳ ಬಗ್ಗೆ ಕೂಲಂಕುಶವಾಗಿ ವಿವರಿಸಿದರು. ಡಾ.ಮಹೇಶ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕು. ರಾಜೇಶ್ವರಿ ನೆಜಿಕಾರ್ ವಂದಿಸಿದರು.

Related posts

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ: ಎಸ್ ಎಸ್ ಎಲ್ ಸಿ ಸಾಧಕ ಚಿನ್ಮಯಿ ಜಿ.ಕೆ ರವರಿಂದ ಶೈಕ್ಷಣಿಕ ವರ್ಷಕ್ಕೆ ಚಾಲನೆ

Suddi Udaya

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಲೆಯಡ್ಕ ಹಾಟ್ ಮಿಕ್ಸ್ ಮತ್ತು ಕಾಂಕ್ರೀಟ್ ಮಿಶ್ರಣ ಘಟಕಕ್ಕೆಪುತ್ತೂರು ಎ.ಸಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ಸ್ಥಳ ಪರಿಶೀಲನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!