April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

ಧಮ೯ಸ್ಥಳ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 4ನೇ ಚಾತುರ್ಮಾಸ್ಯ ವ್ರತಾರಂಭ ಕಾರ್ಯಕ್ರಮ ಜು.3ರಂದು ಕಲ್ಮಂಜದ ಶ್ರೀ ಗುರುದೇವ ಮಠದಲ್ಲಿ ವಿಜೃಂಭಣೆಯಿಂದ ಆರಂಭಗೊಂಡಿತು.

ಬೆಳಿಗ್ಗೆ ವ್ರತಸಂಕಲ್ಪ ಪ್ರಯುಕ್ತ ರಾಮ ತಾರಕ ಯಜ್ಞ ಹಾಗೂ ವೈದಿಕ ವಿಧಿ ವಿಧಾನಗಳು, ಶ್ರೀರಾಮ ದೇವರಿಗೆ ವಿಶೇಷ ಪೂಜೆ, ಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಾಲಯದಿಂದ ಶ್ರೀಗಳ ಪುರಪ್ರವೇಶ ನಡೆಯಿತು.
ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಮೀನುಗಾರಿಕೆ ಸಚಿವ ಮಂಕಾಳ್ ಎಸ್. ವೈದ್ಯ ನೆರವೇರಿಸಿದರು.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸೇವಾ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್, ಟ್ರಸ್ಟಿ. ಚಿತ್ತರಂಜನ್ , ಶ್ರೀ ಧರ ನಾಯಕ್, ವಾಮನ ನಾಯಕ್, ಹೆಚ್.ಆರ್ ನಾಯಕ್, ಗೋವಿಂದ ನಾಯಕ್, ಗೋವಿಂದ ನಾಯಕ್, ಆರ್. ಜೆ ನಾಯಕ್, ಕೃಷ್ಣ ನಾಯಕ್, ಸಚಿವರ ಪತ್ನಿ ಶ್ರೀಮತಿ ಪುಷ್ಪಲತಾ, ಸುಬ್ರಾಯ ಜೆ.ನಾಯಕ್, ರಾಜು ಪೂಜಾರಿ, ಸಂಜೀವ ಪೂಜಾರಿ ಬಂಟ್ವಾಳ, ಬೇಬಿ ಕುಂದರ್, ಚಂದ್ರಶೇಖರ ಗೌಡ, ಟ್ರಸ್ಟಿ ತುಕಾರಾಂ ಸಾಲಿಯಾನ್, ಪ್ರಶಾಂತ್ ಪಾರೆಂಕಿ, ಕೃಷ್ಣಪ್ಪ ಗುಡಿಗಾರ್ ಮೊದಲಾದವರು ಭಾಗವಹಿಸಿದ್ದರು. ಉಪನ್ಯಾಸ ಕೇಶವ ಬಂಗೇರ ಕಾಯ೯ಕ್ರಮ ನಿರೂಪಿಸಿ, ಸ್ವಾಗತಿಸಿದರು.


ಮೌನ ಚಾತುರ್ಮಾಸ್ಯ‌:
ಈ ಬಾರಿ ಚಾತುರ್ಮಾಸ್ಯದ 8 ಭಾನುವಾರಗಳನ್ನು ಹೊರತುಪಡಿಸಿ ಉಳಿದ ದಿನಗಳಂದು ಮೌನ ಚಾತುರ್ಮಾಸ್ಯ ನಡೆಯುವ ಕಾರಣ ಸ್ವಾಮೀಜಿಗಳ ದರ್ಶನ ಸೂರ್ಯೋದಯದಿಂದ ಸೂರ್ಯಾಸ್ತಮಾನದ ತನಕ ಇರುವುದಿಲ್ಲ.

Related posts

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ – ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya
error: Content is protected !!