September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

ಧಮ೯ಸ್ಥಳ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 4ನೇ ಚಾತುರ್ಮಾಸ್ಯ ವ್ರತಾರಂಭ ಕಾರ್ಯಕ್ರಮ ಜು.3ರಂದು ಕಲ್ಮಂಜದ ಶ್ರೀ ಗುರುದೇವ ಮಠದಲ್ಲಿ ವಿಜೃಂಭಣೆಯಿಂದ ಆರಂಭಗೊಂಡಿತು.

ಬೆಳಿಗ್ಗೆ ವ್ರತಸಂಕಲ್ಪ ಪ್ರಯುಕ್ತ ರಾಮ ತಾರಕ ಯಜ್ಞ ಹಾಗೂ ವೈದಿಕ ವಿಧಿ ವಿಧಾನಗಳು, ಶ್ರೀರಾಮ ದೇವರಿಗೆ ವಿಶೇಷ ಪೂಜೆ, ಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಾಲಯದಿಂದ ಶ್ರೀಗಳ ಪುರಪ್ರವೇಶ ನಡೆಯಿತು.
ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಮೀನುಗಾರಿಕೆ ಸಚಿವ ಮಂಕಾಳ್ ಎಸ್. ವೈದ್ಯ ನೆರವೇರಿಸಿದರು.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸೇವಾ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್, ಟ್ರಸ್ಟಿ. ಚಿತ್ತರಂಜನ್ , ಶ್ರೀ ಧರ ನಾಯಕ್, ವಾಮನ ನಾಯಕ್, ಹೆಚ್.ಆರ್ ನಾಯಕ್, ಗೋವಿಂದ ನಾಯಕ್, ಗೋವಿಂದ ನಾಯಕ್, ಆರ್. ಜೆ ನಾಯಕ್, ಕೃಷ್ಣ ನಾಯಕ್, ಸಚಿವರ ಪತ್ನಿ ಶ್ರೀಮತಿ ಪುಷ್ಪಲತಾ, ಸುಬ್ರಾಯ ಜೆ.ನಾಯಕ್, ರಾಜು ಪೂಜಾರಿ, ಸಂಜೀವ ಪೂಜಾರಿ ಬಂಟ್ವಾಳ, ಬೇಬಿ ಕುಂದರ್, ಚಂದ್ರಶೇಖರ ಗೌಡ, ಟ್ರಸ್ಟಿ ತುಕಾರಾಂ ಸಾಲಿಯಾನ್, ಪ್ರಶಾಂತ್ ಪಾರೆಂಕಿ, ಕೃಷ್ಣಪ್ಪ ಗುಡಿಗಾರ್ ಮೊದಲಾದವರು ಭಾಗವಹಿಸಿದ್ದರು. ಉಪನ್ಯಾಸ ಕೇಶವ ಬಂಗೇರ ಕಾಯ೯ಕ್ರಮ ನಿರೂಪಿಸಿ, ಸ್ವಾಗತಿಸಿದರು.


ಮೌನ ಚಾತುರ್ಮಾಸ್ಯ‌:
ಈ ಬಾರಿ ಚಾತುರ್ಮಾಸ್ಯದ 8 ಭಾನುವಾರಗಳನ್ನು ಹೊರತುಪಡಿಸಿ ಉಳಿದ ದಿನಗಳಂದು ಮೌನ ಚಾತುರ್ಮಾಸ್ಯ ನಡೆಯುವ ಕಾರಣ ಸ್ವಾಮೀಜಿಗಳ ದರ್ಶನ ಸೂರ್ಯೋದಯದಿಂದ ಸೂರ್ಯಾಸ್ತಮಾನದ ತನಕ ಇರುವುದಿಲ್ಲ.

Related posts

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

31 ವರ್ಷಗಳ ಯಶಸ್ವಿ ಪಯಣ: ಗ್ರಾಹಕರ ವಿಶ್ವಾಸದ ಪ್ರತೀಕವಾಗಿ ಬೆಳೆದ ಸೋಜಾ ಎಲೆಕ್ಟ್ರಾನಿಕ್ಸ್: ಇಂದಿನಿಂದ ಮಾನ್ಸೂನ್ ಆಫರ್ ಪ್ರಾರಂಭ; ಶೇ.10-50ರವರೆಗೆ ವಿಶೇಷ ರಿಯಾಯಿತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಕೇಕ್ ಕತ್ತರಿಸಿ ಸಂಭ್ರಮಾಚರಣೆ

Suddi Udaya

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

Suddi Udaya

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya
error: Content is protected !!