23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

ಧಮ೯ಸ್ಥಳ : ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 4ನೇ ಚಾತುರ್ಮಾಸ್ಯ ವ್ರತಾರಂಭ ಕಾರ್ಯಕ್ರಮ ಜು.3ರಂದು ಕಲ್ಮಂಜದ ಶ್ರೀ ಗುರುದೇವ ಮಠದಲ್ಲಿ ವಿಜೃಂಭಣೆಯಿಂದ ಆರಂಭಗೊಂಡಿತು.

ಬೆಳಿಗ್ಗೆ ವ್ರತಸಂಕಲ್ಪ ಪ್ರಯುಕ್ತ ರಾಮ ತಾರಕ ಯಜ್ಞ ಹಾಗೂ ವೈದಿಕ ವಿಧಿ ವಿಧಾನಗಳು, ಶ್ರೀರಾಮ ದೇವರಿಗೆ ವಿಶೇಷ ಪೂಜೆ, ಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಾಲಯದಿಂದ ಶ್ರೀಗಳ ಪುರಪ್ರವೇಶ ನಡೆಯಿತು.
ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಮೀನುಗಾರಿಕೆ ಸಚಿವ ಮಂಕಾಳ್ ಎಸ್. ವೈದ್ಯ ನೆರವೇರಿಸಿದರು.

ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸೇವಾ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್, ಟ್ರಸ್ಟಿ. ಚಿತ್ತರಂಜನ್ , ಶ್ರೀ ಧರ ನಾಯಕ್, ವಾಮನ ನಾಯಕ್, ಹೆಚ್.ಆರ್ ನಾಯಕ್, ಗೋವಿಂದ ನಾಯಕ್, ಗೋವಿಂದ ನಾಯಕ್, ಆರ್. ಜೆ ನಾಯಕ್, ಕೃಷ್ಣ ನಾಯಕ್, ಸಚಿವರ ಪತ್ನಿ ಶ್ರೀಮತಿ ಪುಷ್ಪಲತಾ, ಸುಬ್ರಾಯ ಜೆ.ನಾಯಕ್, ರಾಜು ಪೂಜಾರಿ, ಸಂಜೀವ ಪೂಜಾರಿ ಬಂಟ್ವಾಳ, ಬೇಬಿ ಕುಂದರ್, ಚಂದ್ರಶೇಖರ ಗೌಡ, ಟ್ರಸ್ಟಿ ತುಕಾರಾಂ ಸಾಲಿಯಾನ್, ಪ್ರಶಾಂತ್ ಪಾರೆಂಕಿ, ಕೃಷ್ಣಪ್ಪ ಗುಡಿಗಾರ್ ಮೊದಲಾದವರು ಭಾಗವಹಿಸಿದ್ದರು. ಉಪನ್ಯಾಸ ಕೇಶವ ಬಂಗೇರ ಕಾಯ೯ಕ್ರಮ ನಿರೂಪಿಸಿ, ಸ್ವಾಗತಿಸಿದರು.


ಮೌನ ಚಾತುರ್ಮಾಸ್ಯ‌:
ಈ ಬಾರಿ ಚಾತುರ್ಮಾಸ್ಯದ 8 ಭಾನುವಾರಗಳನ್ನು ಹೊರತುಪಡಿಸಿ ಉಳಿದ ದಿನಗಳಂದು ಮೌನ ಚಾತುರ್ಮಾಸ್ಯ ನಡೆಯುವ ಕಾರಣ ಸ್ವಾಮೀಜಿಗಳ ದರ್ಶನ ಸೂರ್ಯೋದಯದಿಂದ ಸೂರ್ಯಾಸ್ತಮಾನದ ತನಕ ಇರುವುದಿಲ್ಲ.

Related posts

ಸಂಬೋಳ್ಯದ ಮೃತ ಬಾಲಕ ಸುಮಂತ್ ಮನೆಗೆ ಸಂಸದ ಬ್ರಿಜೇಶ್ ಚೌಟ ಭೇಟಿ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರೋಟರಿ ಕ್ಲಬ್ ಸುಬ್ರಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಮಣ್ಯ ವತಿಯಿಂದ ಐದು ಹಿರಿಯ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya
error: Content is protected !!