25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

ಕಲ್ಮಂಜ : ಕಲ್ಮಂಜ ಗ್ರಾಮದ ಶಾಲಾ ಬಳಿಯ ನಿವಾಸಿ, ಉಜಿರೆ ಅರಿಪ್ಪಾಡಿ ಕಾಂಪ್ಲೇಕ್ಸ್‌ನಲ್ಲಿ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ಬಾಲಕೃಷ್ಣ ಶೆಣೈ (56ವ) ಅವರು ಹೃದಯಾಘಾತದಿಂದ ಇಂದು ಮಧ್ಯಾಹ್ನ ಮಂಗಳೂರು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟಿದ್ದಾರೆ.
ಮಧ್ಯಾಹ್ನ ಊಟವಾದ ಬಳಿಕ ಉಜಿರೆಯ ತನ್ನ ಕಚೇರಿಯಲ್ಲಿದ್ದ ವೇಳೆ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ.

ಉಜಿರೆಯಲ್ಲಿ ಕಳೆದ 20 ವರ್ಷಗಳಿಂದ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ಇವರು ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿ, ಕಿಟ್ಟು ಎಂದೇ ಎಲ್ಲರಿಂದ ಕರೆಯಲ್ಪಡುತ್ತಿದ್ದರು. ಮೃತರು ಪತ್ನಿ ಇಬ್ಬರು ಪುತ್ರರು ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಮಾಸ್ಟರ್ಸ್ ಕೋಚಿಂಗ್ ಕ್ಲಾಸ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಯೂಟ್ಯೂಬರ್ ಸಮೀರ್ ಎಮ್.ಡಿ ವಿಚಾರಣೆಗೆ ಹಾಜರಾಗಲು ನೋಟಿಸ್‌ ಜಾರಿ

Suddi Udaya

ಕುವೆಟ್ಟು: ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಯುವ ವೈಭವ: ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!