25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

ಕಲ್ಮಂಜ : ಕಲ್ಮಂಜ ಗ್ರಾಮದ ಶಾಲಾ ಬಳಿಯ ನಿವಾಸಿ, ಉಜಿರೆ ಅರಿಪ್ಪಾಡಿ ಕಾಂಪ್ಲೇಕ್ಸ್‌ನಲ್ಲಿ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ಬಾಲಕೃಷ್ಣ ಶೆಣೈ (56ವ) ಅವರು ಹೃದಯಾಘಾತದಿಂದ ಇಂದು ಮಧ್ಯಾಹ್ನ ಮಂಗಳೂರು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟಿದ್ದಾರೆ.
ಮಧ್ಯಾಹ್ನ ಊಟವಾದ ಬಳಿಕ ಉಜಿರೆಯ ತನ್ನ ಕಚೇರಿಯಲ್ಲಿದ್ದ ವೇಳೆ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ.

ಉಜಿರೆಯಲ್ಲಿ ಕಳೆದ 20 ವರ್ಷಗಳಿಂದ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ಇವರು ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿ, ಕಿಟ್ಟು ಎಂದೇ ಎಲ್ಲರಿಂದ ಕರೆಯಲ್ಪಡುತ್ತಿದ್ದರು. ಮೃತರು ಪತ್ನಿ ಇಬ್ಬರು ಪುತ್ರರು ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ

Suddi Udaya

ಆ.9: ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕುಟುಂಬೋತ್ಸವ: ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ ವಿಜೇತರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya
error: Content is protected !!