September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

ಕಲ್ಮಂಜ : ಕಲ್ಮಂಜ ಗ್ರಾಮದ ಶಾಲಾ ಬಳಿಯ ನಿವಾಸಿ, ಉಜಿರೆ ಅರಿಪ್ಪಾಡಿ ಕಾಂಪ್ಲೇಕ್ಸ್‌ನಲ್ಲಿ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ಬಾಲಕೃಷ್ಣ ಶೆಣೈ (56ವ) ಅವರು ಹೃದಯಾಘಾತದಿಂದ ಇಂದು ಮಧ್ಯಾಹ್ನ ಮಂಗಳೂರು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟಿದ್ದಾರೆ.
ಮಧ್ಯಾಹ್ನ ಊಟವಾದ ಬಳಿಕ ಉಜಿರೆಯ ತನ್ನ ಕಚೇರಿಯಲ್ಲಿದ್ದ ವೇಳೆ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರು ದಾರಿ ಮಧ್ಯೆ ಮೃತಪಟ್ಟರೆನ್ನಲಾಗಿದೆ.

ಉಜಿರೆಯಲ್ಲಿ ಕಳೆದ 20 ವರ್ಷಗಳಿಂದ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ಇವರು ಎಲ್ಲರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿ, ಕಿಟ್ಟು ಎಂದೇ ಎಲ್ಲರಿಂದ ಕರೆಯಲ್ಪಡುತ್ತಿದ್ದರು. ಮೃತರು ಪತ್ನಿ ಇಬ್ಬರು ಪುತ್ರರು ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ (ಪ್ರೌಢಶಾಲಾ ವಿಭಾಗ,) : ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನ ಬಳಸಿ ಮತದಾನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya
error: Content is protected !!