July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆ ಯಲ್ಲಿ ಜು1 ರಂದು ಅಖಿಲ ಭಾರತ ಸಾಹಿತ್ಯ ಪರಿಷತ್, ಕರ್ನಾಟಕ ಇದರ ಬೆಳ್ತಂಗಡಿ ತಾಲೂಕು ಸಮಿತಿಯ ಆಶ್ರಯದಲ್ಲಿ “ಶುಚಿ ಜೀವನ ದರ್ಶನ” ಎಂಬ ವಿಷಯದ ಕುರಿತು ಚಿಂತನ ಕಾರ್ಯಕ್ರಮ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಭರತೇಶ ಶೆಟ್ಟಿ , ಎಕ್ಕಾರು ಆಗಮಿಸಿ ವಿದ್ಯಾರ್ಥಿಗಳಿಗೆ ಪೌರಾಣಿಕ ಪಾತ್ರ ಗಳ ಉದಾಹರಣೆ ಯೊಂದಿಗೆ ಆದರ್ಶ ವ್ಯಕ್ತಿಯಾಗಿ ಹೇಗೆ ಬಾಳಬೇಕು ಎಂಬ ಜೀವನ ಮೌಲ್ಯ ಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ ,ಇದರ ಬೆಳ್ತಂಗಡಿ ಸಮಿತಿಯ ಅಧ್ಯಕ್ಷ ಗಣಪತಿ ಕುಳಮರ್ವ ಸ್ವಾಗತಿಸಿದರು.

ಸುಂದರ ಶೆಟ್ಟಿ ಇವರು ಪ್ರಾಸ್ತಾವಿಕ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಿತ ಕೆ ಆರ್ ವಹಿಸಿದ್ದರು. ಶ್ರೀಮತಿ ಸುಭಾಶಿಣಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಸೇವಾ ಸಮಿತಿಯ ಸದಸ್ಯರು ಶಿಕ್ಷಕ ವೃಂದದವರು ಭಾಗಿಯಾಗಿದ್ದರು.

Related posts

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya
error: Content is protected !!