July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

ಚಾರ್ಮಾಡಿ ಫಾಟ್‌ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿಯಾದ ಘಟನೆ ಜು.2 ರಂದು ನಡೆದಿದೆ.

ನಿನ್ನೆ ಸಂಜೆಯೂ ಉತ್ತಮ ಮಳೆ ಸುರಿದಿದ್ದು ರಸ್ತೆ ಜಾರುತ್ತಿದ್ದ ಕಾರಣ ಚಾಲಕರ ನಿಯಂತ್ರಣಕ್ಕೆ ಸಿಗದೆ ವಾಹನಗಳು ಉರುಳಿ ಬಿದ್ದಿವೆ ಎನ್ನಲಾಗಿದೆ.

ಉಜಿರೆಯಿಂದ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ಟಿಟಿ ವಾಹನ ಹಾಗೂ ಮೂಡಿಗೆರೆಯಿಂದ ಉಜಿರೆ ಕಡೆ ಹೋಗುತ್ತಿದ್ದ ಕಾರು ಚಾರ್ಮಾಡಿ ಪೇಟೆಯಲ್ಲಿ 100 ಮೀ. ಅಂತರದಲ್ಲಿ ಉರುಳಿ ಬಿದ್ದಿವೆ. ಇಲ್ಲಿನ ಸುಮಾರು 3 ಕಿ. ಮೀ. ವ್ಯಾಪ್ತಿಯ ರಸ್ತೆ ಮಳೆಗಾಲದಲ್ಲಿ ವಿಪರೀತ ಜಾರುವುದರಿಂದ ಹಲವಾರು ಅಪಘಾತಗಳು ಸಂಭವಿಸುತ್ತವೆ. ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನ ಸಮೀಪ ಬೆಂಗಳೂರು ಮೂಲದ ಕಾರು ಪಲ್ಟಿಯಾಗಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.

Related posts

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ವಾಣಿ ಪಿಯು ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿ ಶ್ರೀಮತಿ ಸವಿತಾ ಎರ್ಮಾಳ್ ಭೇಟಿ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ 27 ನೇ ಕ್ಷೇಮ ನಿಧಿ ವಿತರಣೆ

Suddi Udaya

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya
error: Content is protected !!