23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಗಾಗಿ ಪೊಲೀಸರ ಮನವಿ


ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದ ಅಪರಿಚಿತ ವ್ಯಕ್ತಿಯೋರ್ವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ವಾರೀಸುದಾರರ ಪತ್ತೆಗಾಗಿ ಧರ್ಮಸ್ಥಳ ಪೊಲೀಸ್ ರು ಹುಡುಕಾಟ ನಡೆಸುತ್ತಿದ್ದಾರೆ.

ಧರ್ಮಸ್ಥಳ ದೇವಸ್ಥಾನದ ಮಾಹಿತಿ ಕಛೇರಿಯಲ್ಲಿ, ಸ್ವಚ್ಛತಾ ವಿಭಾಗದಲ್ಲಿ ರಾತ್ರಿ ಪಾಳಿ ಕೆಲಸ ಮಾಡಿಕೊಂಡಿದ್ದು ವ್ಯಕ್ತಿಯೊಬ್ಬರು ಜೂ.30 ರಂದು ರಾತ್ರಿ ಮಾಹಿತಿ ಕಚೇರಿಯ ಬಳಿ ಇರುವ ಮೆಟ್ಟಿಲಿನ ಬಳಿ ಸುಮಾರು 45 ರಿಂದ 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಅಸ್ವಸ್ಥರಾಗಿ ಮಾತನಾಡಲು ಕಷ್ಟವಾಗುತ್ತಿರುವುದನ್ನು ಕಂಡು ಕೂಡಲೇ ಅವರು ಕೆಲಸ ಮಾಡುತ್ತಿದ್ದ ಕಚೇರಿಯಿಂದ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಸದ್ರಿ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಮಯ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಾರೀಸುದಾರರ ಪತ್ತೆಗಾಗಿ ಮನವಿ ಮಾಡಿದ್ದಾರೆ.

Related posts

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ನಾವೂರು ಹಿ.ಪ್ರಾ. ಶಾಲೆಯಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

Suddi Udaya

ಉಜಿರೆಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿಗೆ ಅಂತಾರಾಷ್ಟ್ರೀಯ ಗಣ್ಯರ ಭೇಟಿ: ಜಪಾನ್ ದೇಶದ ಪ್ರೋ. ಮಾಸ ಕಟೋಕ, ಕಾಂಬೋಡಿಯಾ ಸಚಿವ ಇಕೆ ಬುಂತ  ಭೇಟಿ

Suddi Udaya
error: Content is protected !!