Uncategorizedವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ನಡ: ಸರಕಾರಿ ಪ್ರೌಢ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ( ಚೈಲ್ಡ್ ರೈಟ್ಸ್ ಕ್ಲಬ್) ನ್ನು ಜು.3 ರಂದು ಉದ್ಘಾಟಿಸಲಾಯಿತು.

ಸಂಘದ ಉದ್ಘಾಟನೆಯನ್ನು ಚೈಲ್ಡ್ ರೈಟ್ಟ್ಸ್ ಇದರ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಕುಮಾರ್ ನೆರವೇರಿಸಿ ಸಂಘದ ಕರ್ತವ್ಯಗಳ ಬಗ್ಗೆ ವಿವರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮುಖ್ಯಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ವಹಿಸಿದ್ದರು.

ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಮಕ್ಕಳ ಹಕ್ಕುಗಳ ಸಂಘದ ಮೂಲಕ ಹೇಗೆ ಪ್ರಶ್ನಿಸಬಹುದು ಎಂಬ ಬಗ್ಗೆ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಮಕ್ಕಳ ಹಕ್ಕುಗಳ ಸಂಘದ ಮಾರ್ಗದರ್ಶಿ ಶಿಕ್ಷಕ ಮೋಹನ ಬಾಬು ಡಿ ಇವರು ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಮಾಜ ವಿಜ್ಞಾನ ಶಿಕ್ಷಕ ಶಿವಪುತ್ರ ಸುಣಗಾರ ಉಪಸ್ಥಿರಿದ್ದರು. ಸಭೆಯಲ್ಲಿ ಮಕ್ಕಳ ಹಕ್ಕಗಳ ಕೈಪಿಡಿ ಪುಸ್ತಕವನ್ನು ಸಂಘದ 22 ಸದಸ್ಯ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ನಂತರ ನಡೆದ ಸಂಘದ ಸಭೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಚರ್ಚಿಸಲಾಯಿತು.

Related posts

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೂಡಾಯಿಬೆಟ್ಟು ಶಾಲಾ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!