24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

ಗುರುವಾಯನಕೆರೆ:ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿರುವುದು ಅತ್ಯಂತ ಸಂತೋಷ. ಆದರೆ ಆ ಸಾಧನೆ ಇಲ್ಲಿಗೆ ಸೀಮಿತವಾಗದೆ ನಿರಂತರವಾಗಿರಲಿ. ವಿಶೇಷ ಸಾಧಕರಾಗಿ ದೇಶಕ್ಕೆ ಕೊಡುಗೆಯಾಗಿ, ಸಮಾಜಕ್ಕೆ ಆಸ್ತಿಯಾಗಿರಿ ‘ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.

ಅವರು ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭದಲ್ಲಿ ಶೈಕ್ಷಣಿಕ ಸಾಧಕರನ್ನು ಗೌರವಿಸಿ ಅವರು ಮಾತನಾಡಿದರು. ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮಾತನಾಡಿ ‘ ಎಕ್ಸೆಲ್ ಅಪೂರ್ವ ಸಾಧಕರನ್ನು ಹೊಂದಿದ ಕಾಲೇಜು. ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಲ್ಲಿನ ವಿದ್ಯಾರ್ಥಿಗಳು ಹೆಸರು ಮಾಡುವಂತಾಗಲಿ ‘ ಎಂದು ಹಾರೈಸಿದರು.

ನೀಟ್ ನಲ್ಲಿ 692 ಅಂಕಗಳನ್ನು ಪಡೆದ ಆದಿತ್ ಜೈನ್ ಹಾಗೂ ನೀಟ್, ಸಿ ಇ ಟಿ, ಬೋರ್ಡ್ ಎಕ್ಸಾಂ ಸಹಿತ ಜೆ ಇ ಇ ಅಡ್ವಾನ್ಸ್ ಕ್ಲಿಯರ್ ಮಾಡಿದ ಸಂಜನಾ ಈರನ್ನವರ್ ಅವರಿಗೆ ಒಂದು ಲಕ್ಷ ಮೊತ್ತದೊಂದಿಗೆ ಗೌರವಿಸಲಾಯಿತು. ಬೋರ್ಡ್ ಎಕ್ಸಾಂ, ಸಿ ಇ ಟಿ, ನೀಟ್, ಜೆ ಇ ಇ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ 254 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು .ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅಭಿರಾಮ್ , ವೇಣೂರು ವಿದ್ಯೋದಯ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಶಿವರಾಮ ಹೆಗ್ಡೆ, ಉದ್ಯಮಿ ಶಮಂತ್ ಕುಮಾರ್ ಬೆಳ್ತಂಗಡಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶೈಕ್ಷಣಿಕ ಸಂಯೋಜಕರಾದ ನಿಶಾ ಪೂಜಾರಿ ಸಾಧಕರ ಪಟ್ಟಿಯನ್ನು ವಾಚಿಸಿದರು. ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಕನ್ನಡ ವಿಭಾಗದ ಜಯರಾಮ್ ವಂದಿಸಿದರು. ರಸಾಯನ ವಿಜ್ಞಾನ ವಿಭಾಗದ ಈಶ್ವರ್ ಶರ್ಮ ಅವರು ನಿರೂಪಿಸಿದರು.

Related posts

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya

ಜೆಸಿ ಅಕ್ಷತ್ ರೈ ಅವರಿಗೆ “ಸಾಧನಶ್ರೀ” ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಖ್ಯಾತ ವಕೀಲ ರಾಜಶೇಖರ್ ಹಿಲಿಯಾರ್

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya
error: Content is protected !!