30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಚತ್ತೀಸ್ ಘಡ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ಇತ್ತೀಚೆಗೆ ಭೇಟಿ ನೀಡಿದರು.

ಸಂಘದ ವ್ಯವಹಾರ ವಿವಿಧ ಚಟುವಟಿಕೆಗಳನ್ನು, ಗಮನಿಸಿ ಸಂತಸ ವ್ಯಕ್ತಪಡಿಸಿದರು. ಮುಂಡಾಜೆ ಪಾಕ್ಸ ನಬಾರ್ಡನಿಂದ ಎಂಎಸ್ಸಿ ಯೋಜನೆಯಡಿ ನೀಡಿರುವ ಗೋದಾಮು ಕಟ್ಟಡವನ್ನು ಪರಿಶೀಲಿಸಿ, ಇಲ್ಲಿ ಸಂಘ ನಡೆಸುತ್ತಿರುವ ಕೃಷಿ ಯಂತ್ರೋಪಕರಣ ಮಳಿಗೆಯನ್ನು ವೀಕ್ಷಿಸಿದರು.

ಸಂಘದ ಅಧ್ಯಕ್ಷ ಜನಾರ್ದನ ಗೌಡ, ನಿರ್ದೇಶಕ ಶ್ರೀ ರಾಘವ ಮತ್ತು ವೃತ್ತಿಪರ ನಿರ್ದೆಶಕ ಗಜಾನನ ವಝೆ ಸಂಘದ ಕುರಿತು ಮಾಹಿತಿ ನೀಡಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸ್ವಾಗತಿಸಿ, ಶಾಖಾ ವ್ಯವಸ್ಥಾಪಕ ಪ್ರಸನ್ನ ಪರಾಂಜಪೆ ವಂದಿಸಿದರು. ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾರಾಯಣ ಫಡ್ಕೆ ಕಾರ್ಯಕ್ರಮ ನಿರ್ವಹಿಸಿದರು. ನಬಾರ್ಡ್ ಸಂಸ್ಥೆಯ ಶೀಲಾ ಎಂ. ಭಂಡಾರ್ಕರ್ ತಂಡದ ನೇತ್ರತ್ವ ವಹಿಸಿದ್ದರು.

Related posts

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

Suddi Udaya
error: Content is protected !!