September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಚತ್ತೀಸ್ ಘಡ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ಇತ್ತೀಚೆಗೆ ಭೇಟಿ ನೀಡಿದರು.

ಸಂಘದ ವ್ಯವಹಾರ ವಿವಿಧ ಚಟುವಟಿಕೆಗಳನ್ನು, ಗಮನಿಸಿ ಸಂತಸ ವ್ಯಕ್ತಪಡಿಸಿದರು. ಮುಂಡಾಜೆ ಪಾಕ್ಸ ನಬಾರ್ಡನಿಂದ ಎಂಎಸ್ಸಿ ಯೋಜನೆಯಡಿ ನೀಡಿರುವ ಗೋದಾಮು ಕಟ್ಟಡವನ್ನು ಪರಿಶೀಲಿಸಿ, ಇಲ್ಲಿ ಸಂಘ ನಡೆಸುತ್ತಿರುವ ಕೃಷಿ ಯಂತ್ರೋಪಕರಣ ಮಳಿಗೆಯನ್ನು ವೀಕ್ಷಿಸಿದರು.

ಸಂಘದ ಅಧ್ಯಕ್ಷ ಜನಾರ್ದನ ಗೌಡ, ನಿರ್ದೇಶಕ ಶ್ರೀ ರಾಘವ ಮತ್ತು ವೃತ್ತಿಪರ ನಿರ್ದೆಶಕ ಗಜಾನನ ವಝೆ ಸಂಘದ ಕುರಿತು ಮಾಹಿತಿ ನೀಡಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸ್ವಾಗತಿಸಿ, ಶಾಖಾ ವ್ಯವಸ್ಥಾಪಕ ಪ್ರಸನ್ನ ಪರಾಂಜಪೆ ವಂದಿಸಿದರು. ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾರಾಯಣ ಫಡ್ಕೆ ಕಾರ್ಯಕ್ರಮ ನಿರ್ವಹಿಸಿದರು. ನಬಾರ್ಡ್ ಸಂಸ್ಥೆಯ ಶೀಲಾ ಎಂ. ಭಂಡಾರ್ಕರ್ ತಂಡದ ನೇತ್ರತ್ವ ವಹಿಸಿದ್ದರು.

Related posts

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿಯೋಗದಿಂದ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!