27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

ವೇಣೂರು: ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಸಾಮಾನ್ಯ ಸಭೆಯು ಜು. 4ರಂದು ಇಲ್ಲಿಯ ಮಹಾವೀರ ನಗರದ ಬ್ರಹ್ಮಯಕ್ಷ ಕಾಂಪ್ಲೆಕ್ಸ್‌ನಲ್ಲಿ ಜರಗಿತು.
ಸಂಘದ ಅಧ್ಯಕ್ಷ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿ, ವಲಯ ಸಭೆಗಳಿಗೆ ಆಗಮಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ ಸಂಘದ ಎಲ್ಲಾ ಕಾರ್ಯಚಟುವಟಿಕೆಗಳಿಗೆ ಸದಸ್ಯರ ಸಹಕಾರ ಕೋರಿದರು. ಸಂಘದ ಸದಸ್ಯತ್ವ ನವೀಕರಣ, ಜಿಲ್ಲಾ ಸಂಘದ ಸದಸ್ಯತ್ವ ಹಾಗೂ ವಲಯ ಸಮಿತಿಗಳಿಂದ ಮಾಸಿಕ ಸಭೆಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಆ. 22ರಂದು ಅಳದಂಗಡಿಯಲ್ಲಿ ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.
ತಾಲೂಕು ಸಂಘದ ಕಾರ್ಯದರ್ಶಿ ವಸಂತ ಕೆ. ನಾವೂರು, ಗೌರವಾಧ್ಯಕ್ಷ ಸುನಿಲ್, ಉಪಾಧ್ಯಕ್ಷ ಕೆ.ಡಿ. ಜೋಸೆಫ್, ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್., ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಮತ್ತು ಕಾರ್ಯಾಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಭೆಯ ಪೂರ್ಣ ಅತಿಥ್ಯವನ್ನು ವೇಣೂರು ಪದ್ಮಾಂಬ ಸೌಂಡ್ಸ್ & ಶಾಮಿಯಾನದ ಮಾಲಕ ತಾಲೂಕು ಸಂಘದ ಗೌರವಸಲಹೆಗಾರ ಜಿನರಾಜ್ ಜೈನ್ ವಹಿಸಿದ್ದು, ಎಲ್ಲರನ್ನು ಸತ್ಕರಿಸಿದರು. ವಲಯ ಅಧ್ಯಕ್ಷರಾದ ಸುನಿಲ್ ಸ್ವಾಗತಿಸಿ, ಮ್ಯಾಥ್ಯೂ ಕುಟ್ಟಿ ವಂದಿಸಿದರು.

Related posts

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya
error: Content is protected !!