July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

ವೇಣೂರು: ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಸಾಮಾನ್ಯ ಸಭೆಯು ಜು. 4ರಂದು ಇಲ್ಲಿಯ ಮಹಾವೀರ ನಗರದ ಬ್ರಹ್ಮಯಕ್ಷ ಕಾಂಪ್ಲೆಕ್ಸ್‌ನಲ್ಲಿ ಜರಗಿತು.
ಸಂಘದ ಅಧ್ಯಕ್ಷ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿ, ವಲಯ ಸಭೆಗಳಿಗೆ ಆಗಮಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ ಸಂಘದ ಎಲ್ಲಾ ಕಾರ್ಯಚಟುವಟಿಕೆಗಳಿಗೆ ಸದಸ್ಯರ ಸಹಕಾರ ಕೋರಿದರು. ಸಂಘದ ಸದಸ್ಯತ್ವ ನವೀಕರಣ, ಜಿಲ್ಲಾ ಸಂಘದ ಸದಸ್ಯತ್ವ ಹಾಗೂ ವಲಯ ಸಮಿತಿಗಳಿಂದ ಮಾಸಿಕ ಸಭೆಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಆ. 22ರಂದು ಅಳದಂಗಡಿಯಲ್ಲಿ ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.
ತಾಲೂಕು ಸಂಘದ ಕಾರ್ಯದರ್ಶಿ ವಸಂತ ಕೆ. ನಾವೂರು, ಗೌರವಾಧ್ಯಕ್ಷ ಸುನಿಲ್, ಉಪಾಧ್ಯಕ್ಷ ಕೆ.ಡಿ. ಜೋಸೆಫ್, ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್., ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಮತ್ತು ಕಾರ್ಯಾಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಭೆಯ ಪೂರ್ಣ ಅತಿಥ್ಯವನ್ನು ವೇಣೂರು ಪದ್ಮಾಂಬ ಸೌಂಡ್ಸ್ & ಶಾಮಿಯಾನದ ಮಾಲಕ ತಾಲೂಕು ಸಂಘದ ಗೌರವಸಲಹೆಗಾರ ಜಿನರಾಜ್ ಜೈನ್ ವಹಿಸಿದ್ದು, ಎಲ್ಲರನ್ನು ಸತ್ಕರಿಸಿದರು. ವಲಯ ಅಧ್ಯಕ್ಷರಾದ ಸುನಿಲ್ ಸ್ವಾಗತಿಸಿ, ಮ್ಯಾಥ್ಯೂ ಕುಟ್ಟಿ ವಂದಿಸಿದರು.

Related posts

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ – ಶಾಲಾ ಅಭಿವೃದ್ಧಿ ಸಮಿತಿ ರಚನೆ

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya
error: Content is protected !!