25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಚತ್ತೀಸ್ ಘಡ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ಇತ್ತೀಚೆಗೆ ಭೇಟಿ ನೀಡಿದರು.

ಸಂಘದ ವ್ಯವಹಾರ ವಿವಿಧ ಚಟುವಟಿಕೆಗಳನ್ನು, ಗಮನಿಸಿ ಸಂತಸ ವ್ಯಕ್ತಪಡಿಸಿದರು. ಮುಂಡಾಜೆ ಪಾಕ್ಸ ನಬಾರ್ಡನಿಂದ ಎಂಎಸ್ಸಿ ಯೋಜನೆಯಡಿ ನೀಡಿರುವ ಗೋದಾಮು ಕಟ್ಟಡವನ್ನು ಪರಿಶೀಲಿಸಿ, ಇಲ್ಲಿ ಸಂಘ ನಡೆಸುತ್ತಿರುವ ಕೃಷಿ ಯಂತ್ರೋಪಕರಣ ಮಳಿಗೆಯನ್ನು ವೀಕ್ಷಿಸಿದರು.

ಸಂಘದ ಅಧ್ಯಕ್ಷ ಜನಾರ್ದನ ಗೌಡ, ನಿರ್ದೇಶಕ ಶ್ರೀ ರಾಘವ ಮತ್ತು ವೃತ್ತಿಪರ ನಿರ್ದೆಶಕ ಗಜಾನನ ವಝೆ ಸಂಘದ ಕುರಿತು ಮಾಹಿತಿ ನೀಡಿದರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸ್ವಾಗತಿಸಿ, ಶಾಖಾ ವ್ಯವಸ್ಥಾಪಕ ಪ್ರಸನ್ನ ಪರಾಂಜಪೆ ವಂದಿಸಿದರು. ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ನಾರಾಯಣ ಫಡ್ಕೆ ಕಾರ್ಯಕ್ರಮ ನಿರ್ವಹಿಸಿದರು. ನಬಾರ್ಡ್ ಸಂಸ್ಥೆಯ ಶೀಲಾ ಎಂ. ಭಂಡಾರ್ಕರ್ ತಂಡದ ನೇತ್ರತ್ವ ವಹಿಸಿದ್ದರು.

Related posts

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಲ್ಲಿ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸುಮಾರು ರೂ. 7.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಗುರುಪ್ರಸಾದ ಮಂಟಪದ ಉದ್ಘಾಟನೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya
error: Content is protected !!