25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

ವೇಣೂರು: ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಸಾಮಾನ್ಯ ಸಭೆಯು ಜು. 4ರಂದು ಇಲ್ಲಿಯ ಮಹಾವೀರ ನಗರದ ಬ್ರಹ್ಮಯಕ್ಷ ಕಾಂಪ್ಲೆಕ್ಸ್‌ನಲ್ಲಿ ಜರಗಿತು.
ಸಂಘದ ಅಧ್ಯಕ್ಷ ಚಂದ್ರಶೇಖರ್ ಅವರು ಅಧ್ಯಕ್ಷತೆ ವಹಿಸಿ, ವಲಯ ಸಭೆಗಳಿಗೆ ಆಗಮಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿ ಸಂಘದ ಎಲ್ಲಾ ಕಾರ್ಯಚಟುವಟಿಕೆಗಳಿಗೆ ಸದಸ್ಯರ ಸಹಕಾರ ಕೋರಿದರು. ಸಂಘದ ಸದಸ್ಯತ್ವ ನವೀಕರಣ, ಜಿಲ್ಲಾ ಸಂಘದ ಸದಸ್ಯತ್ವ ಹಾಗೂ ವಲಯ ಸಮಿತಿಗಳಿಂದ ಮಾಸಿಕ ಸಭೆಗಳನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಆ. 22ರಂದು ಅಳದಂಗಡಿಯಲ್ಲಿ ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯಿಸಲಾಯಿತು.
ತಾಲೂಕು ಸಂಘದ ಕಾರ್ಯದರ್ಶಿ ವಸಂತ ಕೆ. ನಾವೂರು, ಗೌರವಾಧ್ಯಕ್ಷ ಸುನಿಲ್, ಉಪಾಧ್ಯಕ್ಷ ಕೆ.ಡಿ. ಜೋಸೆಫ್, ಜಿಲ್ಲಾ ಸಂಘದ ಸಂಘಟನಾ ಕಾರ್ಯದರ್ಶಿ ಸಂಜೀವ ಬಿ.ಎಚ್., ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಪ್ರಭಾಕರ ಶೆಟ್ಟಿ ಮತ್ತು ಕಾರ್ಯಾಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಭೆಯ ಪೂರ್ಣ ಅತಿಥ್ಯವನ್ನು ವೇಣೂರು ಪದ್ಮಾಂಬ ಸೌಂಡ್ಸ್ & ಶಾಮಿಯಾನದ ಮಾಲಕ ತಾಲೂಕು ಸಂಘದ ಗೌರವಸಲಹೆಗಾರ ಜಿನರಾಜ್ ಜೈನ್ ವಹಿಸಿದ್ದು, ಎಲ್ಲರನ್ನು ಸತ್ಕರಿಸಿದರು. ವಲಯ ಅಧ್ಯಕ್ಷರಾದ ಸುನಿಲ್ ಸ್ವಾಗತಿಸಿ, ಮ್ಯಾಥ್ಯೂ ಕುಟ್ಟಿ ವಂದಿಸಿದರು.

Related posts

ಮುಂಡಾಜೆ ನಿವಾಸಿ ಜೇಮ್ಸ್‌ ಕಾರಿಮಲ ನಿಧನ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

Suddi Udaya
error: Content is protected !!